ಪ್ರಿಯತಮನಿಗಾಗಿ ಮಕ್ಕಳನ್ನೇ ಕೊಂದ ಪಾಪಿ ತಾಯಿ

ತೆಲಂಗಾಣ,ಏ.5: ಬಾಲ್ಯದ ಸ್ನೇಹಿತ ಪ್ರಿಯತಮ ನನ್ನು ಮದುವೆಯಾಗಲು ಇಚ್ಚಿಸಿದ ಪಾಪಿ ಮಹಿಳೆ ಅದಕ್ಕಾಗಿ ತನ್ನ ಮೂರು ಮಕ್ಕಳನ್ನು ಕೊಂದಿರುವ ಹೇಯ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಅಮೀನ್‌ಪುರ ಮಂಡಲದಲ್ಲಿ ಈ ಘಟನೆ ನಡೆದಿದೆ.

ಮಹಿಳೆಯೊಬ್ಬಳು ತನ್ನ ಹಳೆಯ ಸಂಬಂಧಕ್ಕೆ ಮಕ್ಕಳು ಅಡ್ಡಿಯಾಗಿದ್ದಾರೆ ಎಂದು ತಾನೇ ಹೆತ್ತ ಏನೂ ಅರಿಯದ ಮೂರು ಅಮಾಯಕ ಮಕ್ಕಳನ್ನು ಕೊಲೆ ಮಾಡಿದ್ದಾಳೆ.

ಮೃತರನ್ನು ಸಾಯಿಕೃಷ್ಣ (12), ಮಧುಪ್ರಿಯಾ (10), ಗೌತಮ್ (8) ಎಂದು ಗುರುತಿಸಲಾಗಿದೆ.

ಮಾರ್ಚ್ 27 ರಂದು ಈ ಘನಘೋರ ಹತ್ಯೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ.

ಪೊಲೀಸರು ಈ ನಿಗೂಢ ಕೊಲೆ ಪ್ರಕರಣವನ್ನು ಭೇದಿಸಿ ಆರೋಪಿ ರಜಿತಾ ಅಲಿಯಾಸ್ ಲಾವಣ್ಯ ಮತ್ತು ಆಕೆಯ ಪ್ರಿಯಕರ ಶಿವಕುಮಾರ್ ನನ್ನು ಹೆಡೆಮುರಿ ಕಟ್ಟಿದ್ದಾರೆ.

ರಜಿತಾ ಅಲಿಯಾಸ್ ಲಾವಣ್ಯ 2013 ರಲ್ಲಿ ಬೀರಂಗುಡದ ರಾಘವೇಂದ್ರನಗರ ಕಾಲೋನಿಯ ನಿವಾಸಿ ಅವುರಿಚಿಂತಲ ಚೆನ್ನಯ್ಯ ಅವರನ್ನು ವಿವಾಹವಾಗಿದ್ದಳು.

ಚೆನ್ನಯ್ಯ ಲಾವಣ್ಯಗಿಂತ 20 ವರ್ಷ ದೊಡ್ಡವನಾಗಿದ್ದ. ರಜಿತಾ ಖಾಸಗಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಚೆನ್ನಯ್ಯ ನೀರಿನ ಟ್ಯಾಂಕರ್ ಚಾಲಕ.

ರಜಿತಾ ಜೊತೆಯವರೆಲ್ಲ ಸೇರಿ ಸಹಪಾಠಿಗಳು ಪರಸ್ಪರ ಸಂಪರ್ಕಕ್ಕೆ ಬಂದು ಪರಸ್ಪರ ಭೇಟಿಯಾಗಲು ನಿರ್ಧರಿಸಿ ಅದಕ್ಕಾಗಿ ಒಂದು ಗೆಟ್-ಟುಗೆದರ್ ಆಯೋಜಿಸಿದರು.

ಈ ಕಾರ್ಯಕ್ರಮಕ್ಕೆ ರಜಿತಾ ಕೂಡ ಹೋಗಿದ್ದಳು. ಅದೇ ಕಾರ್ಯಕ್ರಮದಲ್ಲಿ ಆಕೆಯ ಬಾಲ್ಯದ ಸ್ನೇಹಿತ ಹಾಗೂ ಸಹಪಾಠಿ ಶಿವಕುಮಾರ್ ನನ್ನು ಭೇಟಿಯಾಗಿದ್ದಾಳೆ. ಈ ಶಿವಕುಮಾರ್ ನಲ್ಗೊಂಡ ಜಿಲ್ಲೆಯ ಗೋಡುಕೊಂಡದ ನಿವಾಸಿ.

ಅಲ್ಲಿಂದ ಇಬ್ಬರೂ ಪರಸ್ಪರ ಮೊಬೈಲ್ ಸಂಖ್ಯೆ ವಿನಿಮಯ ಮಾಡಿಕೊಂಡು, ಫೋನ್ ನಲ್ಲಿ ಮಾತನಾಡುವುದರಿಂದ ಆರಂಭವಾದ ಇವರ ಸಂಪರ್ಕ ನಂತರ ವಿಡಿಯೋ ಕಾಲ್ ವರೆಗೂ ಮುಂದುವರೆದಿತ್ತು. ಮೊದಲೇ ತನ್ನ 20 ವರ್ಷದ ಹಿರಿಯ ಗಂಡನನ್ನು ಕಂಡರೆ ಇಷ್ಟವಿಲ್ಲದ ರಜಿತಾ ಕ್ರಮೇಣ ಶಿವಕುಮಾರ್ ಗೆ ಹತ್ತಿರವಾದಳು. ಇದೇ ವಿಚಾರವಾಗಿ ಆಗಾಗ ತನ್ನ ಗಂಡ ಚೆನ್ನಯ್ಯ ಜೊತೆ ಜಗಳ ಕೂಡ ಮಾಡುತ್ತಿದ್ದಳು.

ಇದೇ ಸಂದರ್ಭದಲ್ಲಿ ಶಿವಕುಮಾರ್ ನನ್ನು ರಜಿತಾ ಮದುವೆಯಾಗುವಂತೆ ಕೇಳಿದ್ದಾಳೆ ಈ ವೇಳೆ ಶಿವಕುಮಾರ್ ನೀನು ನಿನ್ನ ಗಂಡ ಮತ್ತು ಮಕ್ಕಳನ್ನು ಬಿಟ್ಟು ಬಂದರೆ ನಾನು ನಿನ್ನನು ಮದುವೆಯಾಗುತ್ತೇನೆ ಎಂದು ಹೇಳಿದ್ದಾನೆ, ಇದಕ್ಕೆ ರಜಿತಾ ನಮ್ಮ ಮದುವೆಗೆ ಮಕ್ಕಳು ಅಡ್ಡಿಯಾದರೇ ಅವರನ್ನು ಮುಗಿಸುತ್ತೇನೆ ಎಂದು ಹೇಳಿದ್ದಾಳೆ.

ಇದಕ್ಕೆ ಶಿವಕುಮಾರ್ ಕೂಡ ಒಪ್ಪಿಗೆ ಸೂಚಿಸಿ ಮಾರ್ಚ್ 27ರಂದು ಮಕ್ಕಳ ಕೊಲ್ಲಲು ಸಂಚು ರೂಪಿಸಿದ್ದ. ಅದರಂತೆ ಮಾರ್ಚ್ 27 ರ ಸಂಜೆ ಚೆನ್ನಯ್ಯ ಮನೆಯಿಂದ ಕೆಲಸಕ್ಕೆ ಹೊರಗಡೆ ಹೋದಾಗ ರಜಿತಾ ತನ್ನ ಮೂರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದುಬಿಟ್ಟಿದ್ದಾಳೆ.

ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ರಜಿತಾ ದೊಡ್ಡ ನಾಟಕ ರಚಿಸಿದ್ದಳು. ಕೆಲಸಕ್ಕೆ ಹೋದ ತನ್ನ ಗಂಡ ಮನೆಗೆ ಬರುತ್ತಲೇ ತನಗೆ ಅತೀವ ಹೊಟ್ಟೆ ನೋವು,ರಾತ್ರಿ ಕಬ್ಬು ತಿಂದ ಬಳಿಕ ತೀವ್ರ ಹೊಟ್ಟೆನೋವು ಬಂದಿದೆ ಎಂದು ಹೇಳಿದ್ದಾಳೆ.

ಹೆಂಡತಿಯ ನೋವಿನ ಯಾತನೆ ನೋಡಿದ ಗಂಡ ಚೆನ್ನಯ್ಯ ಆತಂಕಗೊಂಡು ಮಕ್ಕಳು ಮಲಗಿದ್ದಾರೆ ಎಂದು ಭಾವಿಸಿ ಮೊದಲು ರಜಿತಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆಸ್ಪತ್ರೆಯಲ್ಲಿ ರಜಿತಾಳನ್ನು ದಾಖಲಿಸಿ ಬಳಿಕ ಮನೆಗೆ ಬಂದು ಮಕ್ಕಳನ್ನು ನೋಡಿದಾಗ ಅವರು ಸಾವನ್ನಪ್ಪಿರುವುದು ತಿಳಿದಿದೆ. ಕೂಡಲೇ ಚೆನ್ನಯ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಾವಿಗೀಡಾದ ಮಕ್ಕಳ ತಂದೆ ಚೆನ್ನಯ್ಯ ಮತ್ತು ತಾಯಿ ರಜಿತಾಳ ಮೊಬೈಲ್ ಸಂಖ್ಯೆಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ರಜಿತಾಳ ಮೊಬೈಲ್ ನಿಂದ ಒಂದು ಸಂಖ್ಯೆಗೆ ಹೆಚ್ಚು ಬಾರಿ ಕರೆಗಳು ಹೋಗಿದ್ದು, ಈ ಕರೆಗಳನ್ನು ಪರಿಶಿಲೀಸಿ ಅನುಮಾನಗೊಂಡು ರಜಿತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ರಜಿತಾ ಪೊಲೀಸರ ತನಿಖೆ ವೇಳೆ ನಡೆದ ವಿಚಾರ ಬಾಯಿ ಬಿಟ್ಟಿದ್ದು, ಬಳಿಕ ಆಕೆಯ ಪ್ರಿಯಕರ ಶಿವಕುಮಾರ್ ನನ್ನು ಕೂಡ ಬಂಧಿಸಿದ್ದಾರೆ ಎಂದು ಸಂಗಾರೆಡ್ಡಿ ಎಸ್ಪಿ ಪರಿತೋಷ್ ಪಂಕಜ್ ತಿಳಿಸಿದ್ದಾರೆ.

ಪ್ರಿಯತಮನಿಗಾಗಿ ಮಕ್ಕಳನ್ನೇ ಕೊಂದ ಪಾಪಿ ತಾಯಿ Read More

ತೆಲಂಗಾಣದಲ್ಲಿ ಘೋರ ದುರಂತ;ನೀರಿನಲ್ಲಿ ಮುಳುಗಿ ನಾಲ್ವರ ಮರಣ

ತೆಲಂಗಾಣ: ಯುಗಾದಿ ಹಬ್ಬದ ದಿನದಂದೇ ತೆಲಂಗಾಣದಲ್ಲಿ ಘೋರ ದುರಂತ ಸಂಭವಿಸಿದೆ.

ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಇಲ್ಲಿನ ಯಲ್ಲಾರೆಡ್ಡಿ ತಾಲೂಕಿನ ವೆಂಕಟಾಪುರ ಬಳಿ ಈ ದುರಂತ ಸಂಭವಿಸಿದೆ. ತಾಯಿ, ಇಬ್ಬರು ಪುತ್ರರು ಮತ್ತ ಪುತ್ರಿ ಸೇರಿ ನಾಲ್ವರು ನೀರುಪಾಲಾಗಿದ್ದಾರೆ.

ಕೆರೆಯಲ್ಲಿ ಬಟ್ಟೆ ತೊಳೆಯಲೆಂದು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

ದೇಹಗಳನ್ನು ಹರತೆಗೆಯಲು ಪ್ರಯತ್ನಿಸಲಾಗುತ್ತಿದೆ.

ತೆಲಂಗಾಣದಲ್ಲಿ ಘೋರ ದುರಂತ;ನೀರಿನಲ್ಲಿ ಮುಳುಗಿ ನಾಲ್ವರ ಮರಣ Read More

ತೆಲಂಗಾಣದಲ್ಲಿ ಘೋರ ದುರಂತ;ನೀರಿನಲ್ಲಿ ಮುಳುಗಿ ನಾಲ್ವರ ಮರಣ

ತೆಲಂಗಾಣ: ಯುಗಾದಿ ಹಬ್ಬದ ದಿನದಂದೇ ತೆಲಂಗಾಣದಲ್ಲಿ ಘೋರ ದುರಂತ ಸಂಭವಿಸಿದೆ.

ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಇಲ್ಲಿನ ಯಲ್ಲಾರೆಡ್ಡಿ ತಾಲೂಕಿನ ವೆಂಕಟಾಪುರ ಬಳಿ ಈ ದುರಂತ ಸಂಭವಿಸಿದೆ. ತಾಯಿ, ಇಬ್ಬರು ಪುತ್ರರು ಮತ್ತ ಪುತ್ರಿ ಸೇರಿ ನಾಲ್ವರು ನೀರುಪಾಲಾಗಿದ್ದಾರೆ.

ಕೆರೆಯಲ್ಲಿ ಬಟ್ಟೆ ತೊಳೆಯಲೆಂದು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

ದೇಹಗಳನ್ನು ಹರತೆಗೆಯಲು ಪ್ರಯತ್ನಿಸಲಾಗುತ್ತಿದೆ.

ತೆಲಂಗಾಣದಲ್ಲಿ ಘೋರ ದುರಂತ;ನೀರಿನಲ್ಲಿ ಮುಳುಗಿ ನಾಲ್ವರ ಮರಣ Read More

ಗ್ಯಾರಂಟಿ ಯೋಜನೆಗಳು: ಸಂಕಷ್ಟಕ್ಕೆ ಸಿಲುಕಿದ ತೆಲಂಗಾಣ ಸರ್ಕಾರ

ಹೈದರಾಬಾದ್‌: ಗ್ಯಾರಂಟಿ ಯೋಜನೆ ಜಾರಿ ಮಾಡಿ ಈಗಾಗಲೇ ಹಿಮಾಚಲ ಪ್ರದೇಶದಲ್ಲಿರುವ ಕಾಂಗ್ರೆಸ್‌ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದು,ಇತ್ತ ತೆಲಂಗಾಣ ರೇವಂತ್‌ ರೆಡ್ಡಿ ಸರ್ಕಾರವೂ ಸಂಕಷ್ಟಕ್ಕೆ ತುತ್ತಾಗಿದೆ.

ಸರ್ಕಾರಿ ನೌಕರರಿಗೆ ಸಂಬಳ ನೀಡಲೂ ದುಡ್ಡಿಲ್ಲ ಎಂದು ರೇವಂತ್‌ ರೆಡ್ಡಿ ಸರ್ಕಾರ
ಹೇಳಿದೆ.

ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರಿಂದ ಈಗ ಸರ್ಕಾರದ ಬಳಿ ಸಂಬಳ ಕೊಡುವುದಕ್ಕೂ ಹಣ ಇಲ್ಲ. ನಮ್ಮ ಸರ್ಕಾರ ಸಾಲದ ಹೊರೆ ಮತ್ತು ಇತರ ಕಾರಣಗಳಿಂದ ಹಣಕಾಸಿನ ಕೊರತೆಯನ್ನು ಎದುರಿಸುತ್ತಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಆರ್‌ಬಿಐಯಿಂದ 4 ಸಾವಿರ ಕೋಟಿ ರೂ ಸಾಲ ಪಡೆದಿದ್ದೇವೆ ಎಂದು ಸಿಎಂ ರೇವಂತ್‌ ರೆಡ್ಡಿ ಅವರೇ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ಹಣ ಇಲ್ಲದ ಕಾರಣ ರಾಜ್ಯದ ಸರ್ಕಾರಿ ನೌಕರರಿಗೆ ಪ್ರತೀ ತಿಂಗಳ ಆರಂಭದಲ್ಲಿ ವೇತನ ನೀಡಲು ಕಷ್ಟವಾಗುತ್ತಿದೆ. ನೌಕರರ ತುಟ್ಟಿ ಭತ್ಯೆ (ಡಿಎ) ಬೇಡಿಕೆ ನ್ಯಾಯಯುತವಾದದ್ದೇ. ಆದರೆ ಪ್ರಸ್ತುತ ಕಠಿಣ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಾಗಿ ಒತ್ತಾಯಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಮುಂದೆ ಸರ್ಕಾರದ ಹಣಕಾಸು ಪರಿಸ್ಥಿತಿಯ ಸಂಪೂರ್ಣ ವಿವರವನ್ನು ನೀಡುತ್ತೇನೆ. ಸರ್ಕಾರಿ ನೌಕರರು ಮುಂದಿನ ದಿನಗಳಲ್ಲಿ ತಮ್ಮ ಕೆಲಸಗಳನ್ನು ಸೇವೆಯಂತೆ ಮಾಡಬೇಕು. ನೌಕರರು ದಯವಿಟ್ಟು ಸರ್ಕಾರದ ಜೊತೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ರೇವಂತ್‌ ರೆಡ್ಡಿ ತಮ್ಮ ರಾಜ್ಯದ ಕರಾಳ ಆರ್ಥಿಕ ಪರಿಸ್ಥಿತಿಯನ್ನು ತೆರೆದಿಟ್ಟಿದ್ದರು.

ರಾಜ್ಯದ ಸಾಲದ ಮೊತ್ತ ಈಗ 7 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ರಾಜ್ಯದ ಮಾಸಿಕ ಆದಾಯ 18,500 ಕೋಟಿ ರೂ. ಇದೆ. ಅದರಲ್ಲಿ 6,500 ಕೋಟಿ ರೂ. ವೇತನ ಮತ್ತು ಪಿಂಚಣಿ ಪಾವತಿಗೆ ಹೋಗುತ್ತಿದೆ. 6,500 ಕೋಟಿ ರೂ. ಸಾಲ ಮತ್ತು ಬಡ್ಡಿ ಮರುಪಾವತಿಗೆ ಬೇಕು. ಉಳಿದ ಕೇವಲ 5,000 ಕೋಟಿ ರೂ. ಮೊತ್ತವನ್ನು ವಿವಿಧ ಯೋಜನೆಗಳಿಗೆ ಬಳಸಲಾಗುತ್ತಿದೆ. ಹೀಗಾಗಿ ಉಳಿದ ವೆಚ್ಚಗಳಿಗೆ ಸರ್ಕಾರದ ಬಳಿ ದುಡ್ಡೇ ಇಲ್ಲ ಎಂದು ಹೇಳಿದ್ದರು.

2023ರ ಮೇ ತಿಂಗಳಿನಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 5 ಗ್ಯಾರಂಟಿಗಳನ್ನು ಪ್ರಕಟಿಸಿ ಅಧಿಕಾರಕ್ಕೆ ಏರಿತ್ತು. ಇದರಿಂದ ಉತ್ತೇಜನಗೊಂಡ ಕಾಂಗ್ರೆಸ್‌ ತೆಲಂಗಾಣ ಚುನಾವಣೆಯಲ್ಲೂ ಗ್ಯಾರಂಟಿ ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಏರಿತ್ತು.

ಕೆಲ ತಿಂಗಳ ಹಿಂದೆ ಕಾಂಗ್ರೆಸ್‌ ಆಡಳಿತದ ಮತ್ತೊಂದು ರಾಜ್ಯವಾದ ಹಿಮಾಚಲಪ್ರದೇಶದಲ್ಲೇ ಇದೇ ಪರಿಸ್ಥಿತಿ ನಿರ್ಮಾಣವಾಗಿ, ಇತಿಹಾಸದಲ್ಲೇ ಮೊದಲ ಬಾರಿಗೆ ವೇತನ, ಪಿಂಚಣಿ ಪಾವತಿ ವಿಳಂಬವಾಗಿತ್ತು. ಸಿಎಂ, ಶಾಸಕರ ವೇತನ ಪಾವತಿ ಮುಂದೂಡಲಾಗಿತ್ತು.

ಇದನ್ನೆಲ್ಲ ನೋಡುತ್ತಿದ್ದರೆ ಕರ್ನಾಟಕದ ಪಾಡೇನಪ್ಪಾ ಎಂದು ಜನತೆ ಆತಂಕ ಪಡುವಂತಾಗಿದೆ.

ಗ್ಯಾರಂಟಿ ಯೋಜನೆಗಳು: ಸಂಕಷ್ಟಕ್ಕೆ ಸಿಲುಕಿದ ತೆಲಂಗಾಣ ಸರ್ಕಾರ Read More