ಮೈಸೂರಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅಗತ್ಯ ಕ್ರಮ: ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದು, ಪ್ರವಾಸಿ ತಾಣಗಳ ಅಭಿವೃದ್ಧಿಗೆ ವರದಿ ತಯಾರಿಸಿ ಕ್ರಮವಹಿಸ ಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರವಾಸೋಧ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹೋಮ್ ಸ್ಟೇ ಗಳಲ್ಲಿ 5 ರೂಮ್ ಗಳು ಮಾತ್ರ ಇರಬೇಕು. ನಗರ ಪ್ರದೇಶಗಳಲ್ಲಿ ಹೋಟೆಲ್ ಗಳನ್ನು ಹೋಮ್ ಸ್ಟೇ ಗಳಾಗಿ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ವರುಣಾ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಟೆಂಡರ್ ನೀಡಲಾಗಿದೆ ಅದೇ ರೀತಿ ಪ್ರವಾಸಿ ಬೋಟಿಂಗ್ ವ್ಯವಸ್ಥೆ ಮಾಡಲು ಸಾಧ್ಯವಿರುವ ಎರಡು ಮೂರು ಕೆರೆಗಳನ್ನು ಗುರುತಿಸುವಂತೆ ಪ್ರವಾಸೋಧ್ಯಮ ಇಲಾಖೆಯ ಜಂಟಿ ನಿರ್ದೇಶಕರಿಗೆ ಇಲ್ಲಾಧಿಕಾರಿಗಳು ಸೂಚಿಸಿ ದರು.

ಪ್ರವಾಸೋಧ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ ಕೆ ಸವಿತಾ ಅವರು ಮಾತನಾಡಿ ಕೇಂದ್ರ ಪ್ರವಾಸೋಧ್ಯಮ ಇಲಾಖೆ ವತಿಯಿಂದ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಸೆಲ್ಪಿ ಪಾಯಿಂಟ್ ಗಳು ಹಾಗೂ ಮಾಹಿತಿ ಫಲಕಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.

ವರುಣಾ ಕೆರೆಯಲ್ಲಿ ಸಾಹಸ ಕ್ರೀಡೆ ಗಳು ಹಾಗೂ ಸದರಿ ಸ್ಥಳಗಳಲ್ಲಿ ಜಿಪ್ ಲೈನ್, ಸ್ಕೈ ಸೈಕಲ್ ಮತ್ತು ಜಾಯಿಂಟ್ ಸ್ವಿಂಗ್ ಎಂಬ ಹೆಚ್ಚುವರಿ ಚಟುವಟಿಕೆಗಳನ್ನು ಆರಂಭಿಸಲು ಅನುಮತಿ ನೀಡಬಹುದಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ
ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ್ ದರ್ಶನ 2.0 ಅಡಿಯಲ್ಲಿ ಮೈಸೂರಿನ ಫೇಸ್ 1ರಲ್ಲಿ ಮೃಗಾಲಯ ಹಾಗೂ ಕಾರಂಜಿ ಕೆರೆ ಒಳಗೊಂಡಂತೆ ಟಾಂಗಾ ರೈಡ್, ಎಕೋಲಾಜಿಕಲ್ ಎಕ್ಸ್ ಫೀರಿಯ್ಸ್ ಸಂಬಂಧ ಡಿಪಿಆರ್ ಸಲ್ಲಿಕೆಯಾಗಿದ್ದು ಟೆಂಡರ್ ಕರೆಯಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ವಿವೇಕಾನಂದ, ಮಹಾನಗರ ಪಾಲಿಕೆ ಆಯುಕ್ತರಾದ ಅಸಾದ್ ಉರ್ ರೆಹಮಾನ್ ಶರೀಫ್, ಡಿಸಿಎಫ್ ಡಾ. ಕೆ.ಎನ್. ಬಸವರಾಜು, ಡಿ.ಸಿ.ಪಿ ಮುತ್ತುರಾಜ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಪ್ರಭುಸ್ವಾಮಿ, ಜಿಎಸ್ ಎಸ್ ಯೋಗ ಸಂಸ್ಥೆಯ ಶ್ರೀ ಹರಿ, ಗೈಡ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಅಶೋಕ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೈಸೂರಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಅಗತ್ಯ ಕ್ರಮ: ಲಕ್ಷ್ಮೀಕಾಂತ ರೆಡ್ಡಿ Read More

ಜನವರಿ 2025 ಕ್ಕೆ ಮೈಸೂರು ಫೆಸ್ಟ್ ಆಯೋಜನೆಗೆ ಚಿಂತನೆ-ಎಂ ಕೆ ಸವಿತಾ

ಮೈಸೂರು: ಜನವರಿ 2025 ಕ್ಕೆ ಮೈಸೂರು ಫೆಸ್ಟ್ ಮಾಡುವ ಯೋಜನೆ ಇದ್ದು, ಇದನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಲು ಚಿಂತಿಸಲಾಗುತ್ತಿದೆ ಎಂದು ಪ್ರವಾಸೋಧ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಎಂ ಕೆ ಸವಿತಾ

ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೇರ ಪಾಲದಾರರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು ಚಿತ್ರ ಸಂತೆ, ಪುಡ್ ಪೇಸ್ಟ್ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಮೈಸೂರು ಫೆಸ್ಟ್ ಗೆ ಹೊರ ಜಿಲ್ಲೆ ಹೊರ ರಾಜ್ಯಗಳ ಜನರನ್ನು ಆಕರ್ಷಿಸುವ ರೀತಿ ಮಾಡುವ ಯೋಜನೆ ರೂಪಿಸಲಾಗುವುದು. ಮನರಂಜನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಮೈಸೂರು ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕೈಗಾರಿಕೋದ್ಯಮಿಗಳು,
ಹೂಡಿಕೆದಾರರು ಕೈಜೋಡಿಸಬೇಕೆಂದು ಇದೇ ವೇಳೆ ಎಂ ಕೆ ಸವಿತಾ ಕೋರಿದರು.

ಮೈಸೂರು ಪ್ರವಾಸೋಧ್ಯಮ ನಗರವಾಗಿದ್ದು ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ.ಇದರಿಂದ ಮೈಸೂರು ನಗರದ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ ಆಗುತ್ತದೆ. ಪ್ರವಾಸಿ ತಾಣಗಳ ಅಭಿವೃದ್ಧಿಯಿಂದ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಗೆ ದೇಶ ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ರವಾಸಿಗರ ಹೆಚ್ಚು ಭೇಟಿಯಿಂದ ಹೋಟೆಲ್, ರೆಸ್ಟೋರೆಂಟ್ ಉದ್ಯಮ ಅಭಿವೃದ್ಧಿ ಹೊಂದುತ್ತದೆ ಎಂದು ತಿಳಿಸಿದರು.

ಮೈಸೂರು ಸುಗಂಧ ಕಾರ್ಯಕ್ರಮ ಅದ್ಭುತವಾಗಿ ಯಶಸ್ವಿಯಾಗಿ 3 ದಿನಗಳ ಕಾಲ ನಡೆಯಿತು ಎಂದು ವಿವರಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ ಕೆ ಹರೀಶ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಪ್ರಭುಸ್ವಾಮಿ, ಹೋಟೆಲ್ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷ ನಾರಾಯಣ ಗೌಡ, ಸ್ಕಾಲ್‌ ಇಂಟರ್‌ ನ್ಯಾಷನಲ್‌ ಮೈಸೂರು ವಿಭಾಗದ ಅಧ್ಯಕ್ಷ ಜಯಕುಮಾರ್,ಮೈಸೂರು ಸಂಘ ಸಂಸ್ಧೆಗಳ ಒಕ್ಕೂಟದ ಅಧ್ಯಕ್ಷ ಹಾಗೂ ಟ್ರಾವೆಲ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಸ್. ಪ್ರಶಾಂತ್, ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಲಿಂಗರಾಜು, ಹೋಟೆಲ್ ಜೇಡ್ ಗಾರ್ಡ್ ನ್ ಭರತ್ ಗೌಡ, ಪೈ ವಿಸ್ತಾ ಹೋಟೇಲ್ ಮಹೇಶ್ ಕುಮಾರ್, ಫೈನ್ ಆರ್ಟ್ಸ್ ನ ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

ಜನವರಿ 2025 ಕ್ಕೆ ಮೈಸೂರು ಫೆಸ್ಟ್ ಆಯೋಜನೆಗೆ ಚಿಂತನೆ-ಎಂ ಕೆ ಸವಿತಾ Read More