ವಿಧಾನಪರಿಷತ್ ನಲ್ಲಿ ಅಲೆಮಾರಿ ಜನಾಂಗಕ್ಕೆ ಪ್ರಾತಿನಿಧ್ಯ ನೀಡಲು ಆಪ್ ಆಗ್ರಹ

ಬೆಂಗಳೂರು, ಸೆಪ್ಟೆಂಬರ್.1:
ಕರ್ನಾಟಕ ವಿಧಾನ ಪರಿಷತ್ ನಲ್ಲಿ ತೆರವಾಗಿರುವ ನಾಲ್ಕು ನಾಮನಿರ್ದೇಶನ ಸ್ಥಾನಗಳಲ್ಲಿ ಅಲೆಮಾರಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು
ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯುವ ಮೂಲಕ ಅಲೆಮಾರಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸಲಾಗಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಜಾರಿಗೆ ತಂದಿರುವ ಇತ್ತೀಚಿನ ಒಳ ಮೀಸಲಾತಿಯಲ್ಲಿ ಅಲೆಮಾರಿ ಜನಾಂಗಕ್ಕೆ ಸಾಕಷ್ಟು ಅನ್ಯಾಯವಾಗಿದೆ ಎಂಬ ಕೂಗು ಎಲ್ಲೆಡೆ ಕಂಡುಬರುತ್ತಿದೆ.ಈಗಾಗಲೇ ಪ್ರತಿಭಟನೆಗಳೂ ನಡೆದಿದೆ. ನಮ್ಮ ಪಕ್ಷವೂ ಸಹ ಪ್ರತಿಭಟನೆಗಳಲ್ಲಿ ಸಾಕಷ್ಟು ಬಾರಿ ಭಾಗವಹಿಸಿ ಅವರ ಹಕ್ಕೊತ್ತಾಯ ಗಳಿಗೆ ಸಂಪೂರ್ಣ ಬೆಂಬಲವನ್ನು ಸೂಚಿಸಿದೆ ಎಂದು ಹೇಳಿದರು.

ಒಳ ಮೀಸಲಾತಿಯಲ್ಲಿ ಅಲೆಮಾರಿ ಜನಾಂಗಗಳಿಗೆ ಅನ್ಯಾಯ ಸರಿಪಡಿಸುವ ದಿಶೆಯಲ್ಲಿ ನಾಮನಿರ್ದೇಶನ ವಾಗುವ ವಿಧಾನಪರಿಷತ್ ಸ್ಥಾನಗಳಲ್ಲಿ ಈ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಿ ಮೇಲೆತ್ತುವ ಕೆಲಸ ಆಗಬೇಕು.

ಸಮಬಾಳು ಸಮಪಾಲು ಎಂದು ಸದಾ ಪ್ರತಿಪಾದಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಇತ್ತ ಕಡೆ ಗಮನಹರಿಸಬೇಕೆಂಬ ಒತ್ತಡವನ್ನು ಎಲ್ಲರೂ ಹಾಕಬೇಕಿದೆ ಎಂದು ಸೀತಾರಾಮ ಗುಂಡಪ್ಪ ಒತ್ತಾಯಿಸಿದರು.

ವಿಧಾನಪರಿಷತ್ ನಲ್ಲಿ ಅಲೆಮಾರಿ ಜನಾಂಗಕ್ಕೆ ಪ್ರಾತಿನಿಧ್ಯ ನೀಡಲು ಆಪ್ ಆಗ್ರಹ Read More

ನಾಗರೀಕ ಸಮಾಜದಲ್ಲಿ ಇರಲು ರವಿಕುಮಾರ್ ಯೋಗ್ಯರಲ್ಲ: ಅಂಜನಾ ಗೌಡ

ಬೆಂಗಳೂರು: ವಿಧಾನಪರಿಷತ್ ಸದಸ್ಯ ಹಾಗೂ ಮುಖ್ಯ ಸಚೇತಕ ಎನ್. ರವಿಕುಮಾರ್ ತಮ್ಮ ಹೇಳಿಕೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಮೇಲೆ ಅವಹೇಳನ ಹೇಳಿಕೆ ನೀಡಿರುವುದು ಖಂಡನಾರ್ಹ ಎಂದು
ಆಪ್ ಟೀಕಿಸಿದೆ.

ರವಿಕುಮಾರ್ ಹೇಳಿಕೆ ದೇಶದ ಮಹಿಳಾ ಅಧಿಕಾರಿಗಳು ಹಾಗೂ ದೇಶದ ಮಹಿಳೆಯರ ಘನತೆಗೆ, ಗೌರವಕ್ಕೆ ಮಾಡಿರುವ ಘೋರ ಅಪಮಾನ,ಇಂತಹ ವ್ಯಕ್ತಿಗಳು ನಾಗರಿಕ ಸಮಾಜದಲ್ಲಿ ಇರಲು ಯೋಗ್ಯರಲ್ಲ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಕಾರ್ಯದರ್ಶಿ ಅಂಜನ ಗೌಡ ವಾಗ್ದಾಳಿ ನಡೆಸಿದರು.

ಪಕ್ಷದ ವತಿಯಿಂದ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ ನಂತರ ಮಾತನಾಡಿದ ಅವರು,ಇಂತಹ ನೀಚ ಮನಸ್ಸಿನ ವ್ಯಕ್ತಿಯು ರಾಜ್ಯದ ಚಿಂತಕರ ಚಾವಡಿ ಯಾಗಿರುವ ವಿಧಾನಪರಿಷತ್ತಿನಲ್ಲಿ ಇರುವುದು ಹಾಗೂ ಮುಖ್ಯ ಸಚೇತಕ ಹುದ್ದೆಯಲ್ಲಿ ಮುಂದುವರೆದಿರುವುದು ನಿಜಕ್ಕೂ ಪ್ರಜಾಪ್ರಭುತ್ವಕ್ಕೆ ಮಾಡಿರುವಂತಹ ಅಪಮಾನ. ಇಂತಹ ವ್ಯಕ್ತಿಯು ಯಾವುದೇ ಕಾರಣಕ್ಕೂ ಇಂತಹ ಘನತೆಯ ಅಧಿಕಾರದಲ್ಲಿ ಮುಂದುವರಿಯಲು ಎಳ್ಳಷ್ಟು ಯೋಗ್ಯ ಅಲ್ಲ ಎಂದು ಹೇಳಿದರು.

ಕೂಡಲೇ ರವಿಕುಮಾರ್ ಅವರನ್ನು ವಿಧಾನಪರಿಷತ್ತಿನಿಂದ ಉಚ್ಛಾಟಿಸಬೇಕು ಮತ್ತು ಮುಖ್ಯ ಸಚೇತಕ ಪದವಿಯಿಂದ ಮುಂದುವರಿಯದಂತೆ ವಿಧಾನ ಪರಿಷತ್ತಿನ ಸಭಾಧ್ಯಕ್ಷರಿಗೆ ಶಿಫಾರಸ್ಸು ಮಾಡಬೇಕು ಹಾಗೂ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರನ್ನು ಅಂಜನಾ ಗೌಡ ಒತ್ತಾಯಿಸಿದರು.

ನಾಗರೀಕ ಸಮಾಜದಲ್ಲಿ ಇರಲು ರವಿಕುಮಾರ್ ಯೋಗ್ಯರಲ್ಲ: ಅಂಜನಾ ಗೌಡ Read More