ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ:ಪತ್ನಿ,ಪ್ರಿಯತಮನಿಗೆ ಜೀವಾವಧಿ ಶಿಕ್ಷೆ

ಚಾಮರಾಜನಗರ/ಕೊಳ್ಳೇಗಾಲ: ವಿವಾಹಿತೆ ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡು ಆತನ ಜತೆ‌ ಸೇರಿ ಪತಿಯನ್ನು ಕೊಂದಿರುವುದು ಸಾಬೀತಾದ ಹಿನ್ನೆಲೆಯಲ್ಲಿ
ಕೊಳ್ಳೇಗಾಲ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ.

ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಗುಂಡಿಮಾಳ ಗ್ರಾಮದ ರಾಜಶೇಖರಮೂರ್ತಿ ಕೊಲೆಯಾದ ದುರ್ದೈವಿ.

ಆರೋಪಿಗಳಾದ ರಾಜಶೇಖರ್ ಅವರ ಪತ್ನಿ ನಂದಿನಿ ಮತ್ತು ಆಕೆಯ ಪ್ರಿಯಕರ ದಿನಕರನಿಗೆ ಅಪರ ಜಿಲ್ಲಾ ಮತ್ತು ಸತ್ರ‌ ನ್ಯಾಯಾಲಯದ ನ್ಯಾಧೀಶರಾದ‌ ಟಿ.ಸಿ.ಶ್ರೀಕಾಂತ್ ಅವರು ಜೀವಾವಧಿ ಶಿಕ್ಷೆ ಮತ್ತು ದಂಡವನ್ನು ವಿಧಿಸಿದ್ದಾರೆ.

ವಿವರ:
ರಾಜಶೇಖರಮೂರ್ತಿ ಅವರೊಂದಿಗೆ ನಂದಿನಿ ಮದುವೆಯಾಗಿ ಕಳೆದ 13 ವರ್ಷಗಳಿಂದ ಸಂಸಾರ ನಡೆಸುತ್ತಾ ಪ್ರಾರಂಭದಲ್ಲಿ ಅನ್ನೋನ್ಯವಾಗಿದ್ದಳು.

ನಂತರ ದಿನಕರನೊಂದಿಗೆ ಆಕ್ರಮ ಸಂಬಂಧವನ್ನಿಟ್ಟುಕೊಂಡಿದ್ದಳು. ಇದೇ ವಿಚಾರಕ್ಕೆ ಗಲಾಟೆಯಾಗಿ ಗ್ರಾಮದ ಮುಖಂಡರ ಸಮಕ್ಷಮದಲ್ಲಿ 2-2-2021 ಮತ್ತು 20-4-2021 ರಂದು ನ್ಯಾಯ ಪಂಚಾಯ್ತಿ ಸೇರಿಸಿ ಪ್ರತ್ಯೇಕ ಒಪ್ಪಂದ ಮಾಡಿಸಿ ಒಟ್ಟು 3 ಒಪ್ಪಂದ ಪತ್ರಗಳನ್ನು ಮಾಡಿಸಲಾಗಿತ್ತು.

ಆದರೂ ನಂದಿನಿ ಮತ್ತು ದಿನಕರ ಪುನಃ ಸಂಪರ್ಕದಲ್ಲಿದ್ದರು.23-06-2021 ರಂದು ರಾಜಶೇಖರಮೂರ್ತಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ದಿನಕರ ಮನೆಗೆ ಬಂದಿದ್ದಾನೆ.

ಸ್ವಲ್ಪ ಹೊತ್ತಿನಲ್ಲೇ ರಾಜಶೇಖರಮೂರ್ತಿ ಕೂಡಾ ಮನೆಗೆ ಬಂದಿದ್ದಾರೆ. ಆಗ ನಂದಿನಿ ಮತ್ತು ದಿನಕರ ಜೊತೆಯಲ್ಲಿ ಇದ್ದುದ್ದನ್ನು ನೋಡಿ ಆಕ್ರೋಶಗೊಂಡು ದಿನಕರನ ಮೇಲೆ ಗಲಾಟೆ ಮಾಡಿದ್ದಾರೆ.

ಆಗ ನಂದಿನಿ ಮನೆಯಲ್ಲಿದ್ದ ಖಾರದ ಪುಡಿಯನ್ನು ಗಂಡನ ಕಣ್ಣಿಗೆ ಎರಚಿ ಮಮ್ಮಟ್ಟಿಗೆ ಹಾಕುವ ಕಾವಿನಿಂದ ರಾಜಶೇಖರಮೂರ್ತಿ ಅವರ ತಲೆಗೆ ಹೊಡೆದಿದ್ದಾಳೆ. ನಂತರ ದಿನಕರ ಕೂಡಾ ಅದೇ‌ ಕಾವು ಪಡೆದು ರಾಜಶೇಖರಮೂರ್ತಿ ಅವರ ಮುಖಕ್ಕೆ ಹೊಡೆದಾಗ ಆತ ಪ್ರಜ್ಞೆ ತಪ್ಪಿ ನೆಲದ ಮೇಲೆ ಕುಸಿದು ಬಿದ್ದಿದ್ದಾರೆ.ಅವರ ಮೂಗಿನಿಂದ ರಕ್ತ ಬಂದುದನ್ನು ಕಂಡು ಆರೋಪಿಗಳಿಬ್ಬರೂ ಈ ಕೃತ್ಯವನ್ನು ಮರೆಮಾಚುವ ಸಲುವಾಗಿ ರಾಜಶೇಖರಮೂರ್ತಿಯ ಕೈ ಕಾಲು ಹಿಡಿದು ವಾಸದ ಮನೆಯ ಹಿಂಭಾಗದಲ್ಲಿರುವ ಟಾಯ್ಲೆಟ್ ಗುಂಡಿಯಲ್ಲಿ ತಲೆ ಕೆಳಗಾಗಿ ಹಾಕಿ ಟಾಯ್ಲೆಟ್ ಗುಂಡಿಯ ಸಿಮೆಂಟ್ ಪ್ಲೇಟನ್ನು ಮುಚ್ಚಿಬಿಟ್ಟಿದ್ದಾರೆ.

ಜತೆಗೆ ರಾಜಶೇಖರಮೂರ್ತಿಯ ಬಟ್ಟೆಗಳು, ಹಲ್ಲೆಗೆ ಉಪಯೋಗಿಸಿದ ಕಾವು ನೆಲದ ಮೇಲೆ ಬಿದ್ದಿದ್ದ ರಕ್ತವನ್ನು ಶ್ಯಾಂಪು ಪ್ಯಾಟ್ ಬಳಸಿ ಬಟ್ಟೆಗಳನ್ನು ಸುಟ್ಟು ಹಾಕಿದ್ದಾರೆ.

ನಂತರ ನಂದಿನಿ ಧರಿಸಿದ್ದ ನೈಟಿಯನ್ನು ಒಗೆದು ಸಾಕ್ಷಿ ನಾಶಪಡಿಸಿ ಮಾರನೇ ದಿನ ಏನೂ ತಿಳಿಯದವಳಂತೆ ರಾಜಶೇಖರಮೂರ್ತಿ ಕೆಲಸಕ್ಕೆ ಹೋಗಿದ್ದಾನೆಂದು ಆತನ ತಂದೆ ತಾಯಿಗೆ ತಿಳಿಸಿದ್ದಾಳೆ.

ರಾಜಶೇಖರಮೂರ್ತಿ ಅವರ ಸಹೋದರಿಯ ಮಕ್ಕಳನ್ನು ಬಳಸಿಕೊಂಡು ಟಾಯ್ಲೆಟ್ ಗುಂಡಿಗೆ ಮಣ್ಣು ಹಾಕಿ ಮುಚ್ಚಿದ್ದಾರೆ.

ಒಂದೆರಡು ದಿನವಾದರೂ ಮಗ ಕಾಣದೆ ಹೋದಾಗ ರಾಜಶೇಖರಮೂರ್ತಿ ಅವರ ತಂದೆ ಮಗ ಕಾಣೆಯಾದ ಬಗ್ಗೆ ಠಾಣೆಗೆ ದೂರನ್ನು ನೀಡಿದ್ದಾರೆ.

ನಂತರ ಮನೆಯ ಹಿಂಭಾಗ ಟಾಯ್ಲೆಟ್ ಗೊಂಡಿಯ ಸುತ್ತ ದುರ್ವಾಸನೆ ಬರುತ್ತಿದ್ದನ್ನು ಗಮನಿಸಿ ಅನುಮಾನದಿಂದ ಗುಂಡಿಯ ಸಿಮೆಂಟ್ ಪ್ಲೇಟನ್ನು ಗ್ರಾಮಸ್ಥರ ಸಮ್ಮುಖದಲ್ಲಿ ತೆಗೆಸಿ ನೋಡಿದಾಗ ರಾಜಶೇಖರಮೂರ್ತಿಯ ಶವ ಕೊಳೆತ ಸ್ಥಿತಿಯಲ್ಲಿದ್ದುದು ಕಂಡುಬಂದಿದೆ.

ನಂತರ ಮಗನ ಕೊಲೆಯಾದ ಬಗ್ಗೆ ತಂದೆ ನೀಡಿದ ದೂರಿನ ಆಧಾರದಲ್ಲಿ ತನಿಖಾಧಿಕಾರಿ ಸಂತೋಷ್ ಕಶ್ಯಪ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.

ಈ ಪ್ರ ರಣದಲ್ಲಿ ಎ 1 ಆರೋಪಿ ನಂದಿನಿ,ಎ2 ಆರೋಪಿ ದಿನಕರ ವಿರುದ್ಧ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಆರೋಪಿಗಳಿಬ್ಬರಿಗೂ ಜೀವಾವಧಿ ಶಿಕ್ಷೆ ಮತ್ತು 50,000 ರೂ ದಂಡ ವಿಧಿಸಿ ತೀರ್ಪು ನೀಡಿದೆ.

ಸಿ.ಡಿ ಗಿರೀಶ್, ಸರ್ಕಾರಿ ಅಭಿಯೋಜಕರು, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಳ್ಳೇಗಾಲ ಇವರು ಸರ್ಕಾರದ ಪರವಾಗಿ, ವಾದ ಮಂಡಿಸಿದರು.

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ:ಪತ್ನಿ,ಪ್ರಿಯತಮನಿಗೆ ಜೀವಾವಧಿ ಶಿಕ್ಷೆ Read More

ಕುಡಿತಕ್ಕೆ ಹಣ ನೀಡದ್ದಕ್ಕೆ ಪತ್ನಿಯ ಕೊಂ*ದ ಪಾಪಿ ಪತಿ

ಮೈಸೂರು: ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಹಣ ನೀಡದ ಪತ್ನಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಗರದ ಮಹದೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಗಾಯಿತ್ರಿ ಕೊಲೆಯಾದ ನತದೃಷ್ಟೆ.ಈಗ ಪತಿ ಪಾಪಣ್ಣ ಎಣಿಸುತ್ತಿದ್ದಾನೆ.

ಈ ಹಿಂದೆ ರಿಯಲ್ ಎಸ್ಟೇಟ್ ವಹಿವಾಟು ನಡೆಸುತ್ತಿದ್ದ ಪಾಪಣ್ಣ ಸಾಲ ಮಾಡಿಕೊಂಡಿದ್ದ,ಜೊತೆಗೆ ಕುಡಿತದ ಚಟ ಅಂಟಿಸಿಕೊಂಡಿದ್ದ.

ಕೆಲಸವಿಲ್ಲದೆ ಅಲೆಯುತ್ತಿದ್ದ ಪಾಪಣ್ಣ ಸದಾ ಹಣಕ್ಕಾಗಿ ಪತ್ನಿ ಹಾಗೂ ಮಕ್ಕಳನ್ನ ಪೀಡಿಸುತ್ತಿದ್ದ.ಪಾಪಣ್ಣನ ಮಗಳ ಮದುವೆಯನ್ನ ಇಬ್ಬರು ಗಂಡು ಮಕ್ಕಳು ಸೇರಿ ಮಾಡಿದ್ದರು.ಇದಕ್ಕಾಗಿ ಮಾಡಿದ್ದ ಸಾಲ ಗಂಡು ಮಕ್ಕಳೇ ತೀರಿಸುತ್ತಿದ್ದರು.ಆದರೂ ಕುಡಿತಕ್ಕೆ ಮಾಡಿದ್ದ ಸಾಲ ತೀರಿಸಲು ಆಗಾಗ ಹಣಕ್ಕಾಗಿ ಪತ್ನಿಯನ್ನ ಹಾಗೂ ಮಕ್ಕಳನ್ನು ಪಾಪಣ್ಣ ಪೀಡಿಸುತ್ತಿದ್ದ.

ಸಾಹುಕಾರ ಹುಂಡಿಯಲ್ಲಿ ಜಮೀನು ಇತ್ತು.ಜಮೀನು ಮಾರಾಟ ಮಾಡಿ ಹಣ ಕೊಡುವಂತೆ ಪಟ್ಟು ಹಿಡಿದಿದ್ದ.ಈ ವಿಚಾರದಲ್ಲಿ ದಂಪತಿ ನಡುವೆ ಆಗಾಗ ಜಗಳ ಆಗುತ್ತಿತ್ತು.ಇದೇ ವಿಚಾರದಲ್ಲಿ ನಿನ್ನೆಯೂ ಜಗಳ ಮಾಡಿದ ಪಾಪಣ್ಣ ಮನೆಯಲ್ಲಿ ಮಕ್ಕಳು ಇಲ್ಲದಿದ್ದಾಗ ಪತ್ನಿ ಗಾಯಿತ್ರಿಯನ್ನ ಮೊಚ್ಚಿನಿಂದ ಹಲ್ಲೆ ನಡೆಸಿ ಕೊಂದಿದ್ದಾನೆ.

ನಂತರ ಪಾಪಣ್ಣ ಗಾಬರಿಯಿಂದ ಹೊರಗಿನಿಂದ ಬೀಗ ಹಾಕುತ್ತಿದ್ದ ದೃಶ್ಯ ಮಗ ನೋಡಿದ್ದಾರೆ,ಕೈಗಳು ರಕ್ತಮಯವಾಗಿರುವುದನ್ನ ಗಮನಿಸಿ ಬಾಗಿಲು ತೆರೆದು ನೋಡಿದಾಗ ತಾಯಿ ರಕ್ತದ ಮಡುವಿನಲ್ಲಿ ಕಂಡುಬಂದಿದ್ದಾರೆ.

ತಾಯಿ ಗಾಯಿತ್ರಿಯನ್ನ ತಂದೆ ಕೊಲೆ ಮಾಡಿದ್ದಾನೆಂದು ಪುತ್ರ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ವಿಜಯನಗರ ಪೊಲೀಸರು ಪಾಪಣ್ಣ ನನ್ನು ಬಂದಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕುಡಿತಕ್ಕೆ ಹಣ ನೀಡದ್ದಕ್ಕೆ ಪತ್ನಿಯ ಕೊಂ*ದ ಪಾಪಿ ಪತಿ Read More

ಪೊಲೀಸ್ ಠಾಣೆ ಬಳಿ ಪತ್ನಿಯ ಕೊಂದ ಪತಿ!

ಚಾಮರಾಜನಗರ: ಪಟ್ಟಣ ಪೊಲೀಸ್ ಠಾಣೆ ಸಮೀಪವೇ ಪತಿ ಪತ್ನಿಯನ್ನು ಬರ್ಬರ ಹತ್ಯೆ ಮಾಡಿದ್ದು ಕೊಲೆಗಡುಕರಿಗೆ ಪೊಲೀಸರ ಬಯವೇ ಇಲ್ಲವೇನೊ‌ ಅನಿಸುತ್ತಿದೆ.

ಹೆಂಡತಿಯನ್ನ ಮಚ್ಚಿನಿಂದ ಪತಿ ಕೊಚ್ಚಿ ಕೊಲೆ ಮಾಡಿದ್ದಾನೆ.
ವಿದ್ಯಾ(28)ಕೊಲೆಯಾದ ಮಹಿಳೆ.

ಚಾಮರಾಜನಗರದ ಸೋಮವಾರಪೇಟೆ ಯ ಗಿರೀಶ್ ಎಂಬಾತ ಪತ್ನಿಯನ್ನು ಕೊಂದ ಆರೋಪಿ.

ಕೌಟುಂಬಿಕ ಕಲಹ ಹಿನ್ನೆಲೆ ಪತಿ ಪತ್ನಿ ನಡುವೆ ಜಗಳವಾಗಿ ಅದು ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.

ಇಂದು ಮದ್ಯಾಹ್ನ ವಿದ್ಯಾ ನಡೆದುಕೊಂಡು ಬರುತ್ತಿದ್ದಾಗ ಪತಿ ಮಚ್ಚಿನಿಂದ ಹೊಡೆದು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ವಿದ್ಯಾ ಸಾವನ್ನಪ್ಪಿದ್ದು, ಗಿರೀಶ್ ಪರಾರಿಯಾಗಿದ್ದಾನೆ. ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪೊಲೀಸ್ ಠಾಣೆ ಬಳಿ ಪತ್ನಿಯ ಕೊಂದ ಪತಿ! Read More

ಕರ್ನಾಟಕ ಬ್ಯಾಂಕ್ ಗೆ ವಂಚಿಸಿದ ಕತರ್ನಾಕ್ದಂಪತಿ

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಕರ್ನಾಟಕ ಬ್ಯಾಂಕ್ ಗೆ ಕತರ್ನಾಕ್ ದಂಪತಿ 26 ಲಕ್ಷ ವಂಚಿಸಿದ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.

ಕಾನೂನು ಕ್ರಮ ಕೈಗೊಳ್ಳುವಂತೆ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ್ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಂಪತಿ ವಿರುದ್ದ ಎಫ್ಐಆರ್ ದಾಖಲಿಸಿದ್ದಾರೆ.

ಮೀನಾಕ್ಷಿ ಹಾಗೂ ಗಣೇಶ್ ಬಾಬು ಎಂಬ ದಂಪತಿ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.

2019 ರಲ್ಲಿ ಮೈಸೂರಿನ ಸರಸ್ವತಿಪುರಂ ನಲ್ಲಿರುವ ಕರ್ನಾಟಕ ಬ್ಯಾಂಕ್ ನಲ್ಲಿ ವ್ಯಾಪಾರದ ಉದ್ದೇಶಕ್ಕಾಗಿ ಗಣೇಶ್ ಬಾಬು ಅವರ ಪತ್ನಿ ಮೀನಾಕ್ಷಿ ಹೆಸರಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸಲಾಗಿತ್ತು.

ಸಾಲಕ್ಕಾಗಿ ಬೋಗಾದಿಯ ರಾಜರಾಜೇಶ್ವರಿ ನಗರ ಬಡಾವಣೆಯ ನಿವೇಶನ ಸಂಖ್ಯೆ 28/ಬಿ ಗೆ ಸಂಭಂಧಿಸಿದ ದಾಖಲೆ ನೀಡಿದ್ದಾರೆ.26 ಲಕ್ಷ ರೂ ಸಾಲ ಮಂಜೂರಾಗಿ ಮೀನಾಕ್ಷಿ ಯವರ ಖಾತೆಗೆ ವರ್ಗಾವಣೆ ಆಗಿದೆ.

ನಂತರ ಸಾಲ ಮರುಪಾವತಿಸುವಲ್ಲಿ ಮೀನಾಕ್ಷಿ ವಿಫಲವಾಗಿದ್ದಾರೆ.ನಿವೇಶನ ಹರಾಜು ಹಾಕಲು ಮುಂದಾದಾಗ ನಕಲಿ ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದ್ದು, ದಂಪತಿ ವಿರುದ್ದ ಪ್ರಕರಣ ದಾಖಲಾಗಿದೆ.

ಕರ್ನಾಟಕ ಬ್ಯಾಂಕ್ ಗೆ ವಂಚಿಸಿದ ಕತರ್ನಾಕ್ದಂಪತಿ Read More

ಪತ್ನಿಯ ಅರೆನಗ್ನಗೊಳಿಸಿ ಹಲ್ಲೆ ಮಾಡಿ ಮೆರವಣಿಗೆ ಮಾಡಿದ ಪತಿ

ಮೈಸೂರು: ಪೊಲೀಸ್ ಠಾಣೆ ಹಾಗೂ ಕೌಟುಂಬಿಕ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನ ಹಿಂದಕ್ಕೆ ಪಡೆಯದ ಪತ್ನಿಯನ್ನ ಪತಿ ಅರೆನಗ್ನಗೊಳಿಸಿ ಹಲ್ಲೆ ನಡೆಸಿದ ವಿಲಕ್ಷಣ ಘಟನೆ‌ ಮೈಸೂರಿನಲ್ಲಿ ನಡೆದಿದೆ.

ಪತ್ನಿಯನ್ನ ಪತಿ ಮಹೇಶ್
ಬಲವಂತವಾಗಿ ಕೂಡಿ ಹಾಕಿ,ನಡುರಸ್ತೆಯಲ್ಲಿ ಅರೆನಗ್ನಗೊಳಿಸಿ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾರೆ.

ಹಾಗಾಗಿ ಪತಿ, ಮಾವ ಮತ್ತು ಪತಿಯ ಅಣ್ಣನ ವಿರುದ್ದ ಪತ್ನಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪಲ್ಲವಿ (24) ಎಂಬುವರೇ ಕಿರುಕುಳಕ್ಕೆ ಒಳಗಾದ ಗೃಹಿಣಿ.

ಪತಿ ಮಹೇಶ್, ಮಾವ ಮಲ್ಲಯ್ಯ ಹಾಗೂ ಪತಿ ಅಣ್ಣ ಶಿವು ವಿರುದ್ದ ಎಫ್ ಐ ಆರ್ ದಾಖಲಾಗಿದೆ.

ಮಹೇಶ್ ವಿರುದ್ದ ಪಲ್ಲವಿ ಪೊಲೀಸ್ ಠಾಣೆಯಲ್ಲಿ, ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು ವಿಚಾರಣೆ ಹಂತದಲ್ಲಿದೆ.

ಕೆಲವು ದಿನಗಳ ಹಿಂದೆ ಪತ್ನಿಯನ್ನ ಭೇಟಿ ಮಾಡಿ ಅನ್ಯೋನ್ಯವಾಗಿ ಇರೋಣವೆಂದು ನಂಬಿಸಿ ಪಲ್ಲವಿಯನ್ನ ಮಹೇಶ್ ಕರೆತಂದು ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ಇರಿಸಿದ್ದಾನೆ.ಎರಡು ದಿನ ಸರಿ ಇದ್ದ ಮಹೇಶ್ ಮತ್ತೆ ಕ್ಯಾತೆ ತೆಗೆದು ಪತ್ನಿ ಮೇಲೆ ದರ್ಪ ತೋರಿಸಿದ್ದಾನೆ.

ಪ್ರಕರಣಗಳನ್ನ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ, ಆಕೆಯ ಯಾವ ಭಾಗವನ್ನೂ ನೋಡದೆ ಹಿಗ್ಗಾಮುಗ್ಗ ಥಳಿಸಿದ್ದಾನೆ. ಇದನ್ನ ಪ್ರಶ್ನಿಸಲು ಮಾವ ಮಲ್ಲಯ್ಯನ ಬಳಿ ಬಂದಾಗ ಪತಿ ಹಾಗೂ ಅಣ್ಣ ಶಿವು ಸೇರಿದಂತೆ ಮೂವರು ನಡುರಸ್ತೆಯಲ್ಲಿ ಅರೆನಗ್ನಗೊಳಿಸಿ ಹಲ್ಲೆ ನಡೆಸಿದ್ದಾರೆಂದು ಪಲ್ಲವಿ ದೂರಿನಲ್ಲಿ ತಿಳಿಸಿದ್ದಾರೆ.

ಕೊಲೆ ಮಾಡುವ ಉದ್ದೇಶದಿಂದಲೇ ಪತಿ ಹಾಗೂ ಮಾವ ಪತಿಯ ಅಣ್ಣ ಹಲ್ಲೆ ನಡೆಸಿದ್ದಾರೆಂದು ಪಲ್ಲವಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ನಿಯ ಅರೆನಗ್ನಗೊಳಿಸಿ ಹಲ್ಲೆ ಮಾಡಿ ಮೆರವಣಿಗೆ ಮಾಡಿದ ಪತಿ Read More

ಪತಿಯ ಕೊಂದ ಪತ್ನಿ,ಪ್ರಿಯಕರನ ಜೈಲಿಗಟ್ಟಿದ ಪೊಲೀಸರು!

(ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ)

ಚಾಮರಾಜನಗರ: ಪ್ರಿಯಕರನ ಜತೆ ಸೇರಿ ಪತಿಯನ್ನು ಕೊಂದು ನಾಪತ್ತೆ ದೂರು ದಾಖಲಿಸಿ ಯಾಮಾರಿಸಲು ಯತ್ನಿಸಿದ ನಾಟಕಗಾತಿ ಪತ್ನಿ ಹಾಗೂ ಪ್ರಿಯಕರ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಜನ್ನೂರು ಗ್ರಾಮದ ನಿವಾಸಿ ರಮೇಶ್ (45) ಅವರನ್ನು ನಾಪತ್ತೆಯಾಗಿಧ್ದಾರೆಂದು ಪತ್ನಿ ಗೀತಾ ದೂರು ದಾಖಲಿಸಿ ಪೊಲೀಸರನ್ನೇ ಯಾಮಾರಿಸಹೊರಟಿದ್ದಳು.

ಆದರೆ ದೂರುದಾರೆಯ ನಡೆ ಪೊಲೀಸರಿಗೆ ಅನುಮಾನ ಮೂಡಿಸಿದ ಹಿನ್ನಲೆಯಲ್ಲಿ ತನಿಖೆ ಆರಂಬಿಸಿದಾಗ ಪ್ರಿಯಕರನೊಂದಿಗೆ ಸೇರಿ ಪತ್ನಿ ಗೀತಾ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದು ಇದೀಗ ಇಬ್ಬರನ್ನು ಬಂದಿಸಿ ನ್ಯಾಯಾಂಗ ಬಂದನಕ್ಕೊಪ್ಪಿಸಿಧ್ದಾರೆ.

ಪಿರ್ಯಾದುದಾರೆ ಗೀತಾ ಕುದೇರು ಠಾಣೆಗೆ ಬಂದು ತನ್ನ ಪತಿ ರಮೇಶ ಅವರು ನಾಪತ್ತೆಯಾಗಿದ್ದು ವಾಪಸ್ಸು ಬಂದಿಲ್ಲ, ಆಗಾಗ್ಗೆ ಹೊರಗೆ ಹೋಗುತ್ತಿದ್ದು ವಾಪಸ್ಸು ಬರುತ್ತಿದ್ದರು. ಆದರೆ,ಜ.14 ರಂದು ರಾತ್ರಿ ಹೋದವರು ಬಂದಿಲ್ಲ ಎಂದು ಜನವರಿ ೨೧ ರಂದು ನಾಪತ್ತೆ ದೂರು ನೀಡಿದ್ದಳು.

ನಾಪತ್ತೆ ಪ್ರಕರಣ ದಾಖಲಿಸಿ ಕೊಂಡ ಪೊಲೀಸರು ತನಿಖೆ ಆರಂಭಿಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಿಯಕರ ಗುರುಪಾದಸ್ವಾಮಿಗೂ ನನಗೂ ಅಕ್ರಮ ಸಂಬಂಧವಿದ್ದು ಇಬ್ಬರು ಸೇರಿ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿ ಮೃತದೇಹವನ್ನ ಕುಪ್ಪೇಗಾಲದ ಕಪಿಲ ನದಿಗೆ ಬೀಸಾಡಿ ಯಾರಿಗೂ ಅನುಮಾನ ಬರಬಾರದೆಂದು ನಾಪತ್ತೆ ದೂರು ನೀಡಿದ್ದಾಗಿ ವಿಚಾರಣೆ ವೇಳೆ ಗೀತಾ ಒಪ್ಪಿಕೊಂಡಿದ್ದಾಳೆ.

ಪೊಲೀಸರು ಆರೋಪಿಗಳನ್ನು ಕುಪ್ಪೇಗಾಲ ಬಳಿಯ ಕಪಿಲ ನದಿಗೆ ಕರೆದೊಯ್ದು ಮಾಹಿತಿ ಪಡೆದುಕೊಂಡು ನದಿಯಿಂದ ಮೃತದೇಹವನ್ನು ಹೊರ ತೆಗೆಸಿ, ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಿದ್ದಾರೆ.

ಅಪರಾಧ ಪ್ರಕರಣ ಭೇದಿಸುವಲ್ಲಿ ಸಂತೆಮರಳ್ಳಿ ವೃತ್ತ ಆರಕ್ಷಕ ಬಸವರಾಜು, ಸಂತೆಮರಳ್ಳಿ ಠಾಣೆ ಇನ್ಸ್ ಪೆಕ್ಟರ್ ತಾಜುದ್ದೀನ್ ,ಸಿಬ್ಬಂದಿ ಸುರೇಶ್, ಕುದೇರು ಠಾಣೆಯ ಇನ್ಸ್ ಪೆಕ್ಟರ್ ಎಸ್. ಕುಮುದಾ.ಸಿಬ್ಬಂದಿಗಳಾದ ಶಂಕರ್, ನಾಗ ನಾಯಕ, ಉಮೇಶ್ ಮತ್ತು ‌ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಸ್ಥಳಕ್ಕೆ ಎಸ್ಪಿ ಕವಿತಾ ಅವರು ಭೇಟಿ ನೀಡಿ ಪರಿಶೀಲಿಸಿದರು.

ಪತಿಯ ಕೊಂದ ಪತ್ನಿ,ಪ್ರಿಯಕರನ ಜೈಲಿಗಟ್ಟಿದ ಪೊಲೀಸರು! Read More

ಅಕ್ರಮ ಸಂಬಂಧ ವಿರೋಧಿಸಿದ ಪತ್ನಿ:ಪ್ರಿಯತಮೆಯೊಂದಿಗೆ ಹಲ್ಲೆ ನಡೆಸಿದ ಪತಿ

ಮೈಸೂರು: ಅಕ್ರಮ ಸಂಬಂಧ ವಿರೋಧಿಸಿ ಪ್ರಶ್ನಿಸಿದ ಪತ್ನಿ ಮತ್ತು ಮಗಳ ಮೇಲೆ ಪ್ರಿಯತಮೆ ಜೊತೆ ಸೇರಿ ಪಾಪಿ ಪತಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹೇಯ ಘಟನೆ ನಡೆದಿದ್ದು,ಬೆಂಗಳೂರಿನ ಶ್ವೇತಾ ಎಂಬುವರು ತಮ್ಮ ಪತಿ ಸಂತೋಷ್ ಕುಮಾರ್ ಹಾಗೂ ಆತನ ಪ್ರಿಯತಮೆ ಶಿಲ್ಪಾ ವಿರುದ್ದ ಎನ್.ಆರ್.ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರಿನ ಕೆಂಗೇರಿ ಸಮೀಪದ ಲಿಂಗಧೀರನಹಳ್ಳಿ ನಿವಾಸಿಗಳಾದ ಶ್ವೇತಾ ಹಾಗೂ ಸಂತೋಷ್ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ,ಇಬ್ಬರು ಅನ್ಯೋನ್ಯವಾಗಿದ್ದರು.ಅಷ್ಟರಲ್ಲಿ ಸಂತೋಷ್ ಗೆ ಶಿಲ್ಪಾ ಪರಿಚಯವಾಗಿ ಸ್ನೇಹವಾಗಿದೆ.

ಸುಮಾರು 6 ತಿಂಗಳ ಹಿಂದೆ ಸಂತೋಷ್ ಕುಮಾರ್ ಜೀವನಕ್ಕೆ ಶಿಲ್ಪಾ ಎಂಟ್ರಿಕೊಟ್ಟಿದ್ದರಿಂದ ಇವರ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ.

ಆಗಾಗ ಮೊಬೈಲ್ ನಲ್ಲಿ ಸಂತೋಷ್ ಕುಮಾರ್ ಜೊತೆ ಮಾತನಾಡುವುದು, ಅಶ್ಲೀಲ ಮೆಸೇಜ್ ಗಳನ್ನ ಹಾಕುವುದು ಹೀಗೆ ಶಿಲ್ಪಾ ಕ್ರಮೇಣ ದಂಪತಿಯ ಜೀವನಕ್ಕೆ ಮುಳ್ಳಾಗಿದ್ದಾಳೆ.

ಶಿಲ್ಪಾ ಹೇಳಿದಂತೆ ಕೇಳತೊಡಗಿದ ಸಂತೋಷ್ ಕುಮಾರ್ ಆಗಾಗ ಪತ್ನಿ ಹಾಗೂ ಮಕ್ಕಳ ಮೇಲೆ ಹಲ್ಲೆ ನಡೆಸಿ ರಂಪಾಟ ಮಾಡುತ್ತಿದ್ದ.ಈ ಬಗ್ಗೆ ಈ ಹಿಂದೆ ಶ್ವೇತಾ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ದ ದೂರು ದಾಖಲಿಸಿದ್ದರು.ಈ ಬೆಳವಣಿಗೆ ಇಬ್ಬರು ಮಕ್ಕಳ ಮೇಲೆ ಪರಿಣಾಮ ಬೀರಿತು.

ಕಿರಿ ಮಗಳು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ಮೈಸೂರಿನ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದಳು.ಮಗಳನ್ನ ನೋಡಲು ಶ್ವೇತಾ ತನ್ನ ಹಿರಿ ಮಗಳ ಜೊತೆ ಮೈಸೂರಿಗೆ ಬಂದಾಗ ಬನ್ನಿಮಂಟಪದ ಎಲ್.ಐ.ಸಿ.ಸರ್ಕಲ್ ಬಳಿ ಸಂತೋಷ್ ಕುಮಾರ್ ಹಾಗೂ ಪ್ರಿಯತಮೆ ಶಿಲ್ಪಾ ಎದುರಾಗಿ ಶ್ವೇತಾ ಹಾಗೂ ಮಗಳ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ.

ಹಲ್ಲೆಗೊಳಗಾದ ಶ್ವೇತಾ ಘಟನೆಯಿಂದ ಚೇತರಿಸಿಕೊಂಡ ನಂತರ ಎನ್.ಆರ್.ಠಾಣೆಯಲ್ಲಿ ಪತಿ ಹಾಗೂ ಆತನ ಪ್ರಿಯತಮೆ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಅಕ್ರಮ ಸಂಬಂಧ ವಿರೋಧಿಸಿದ ಪತ್ನಿ:ಪ್ರಿಯತಮೆಯೊಂದಿಗೆ ಹಲ್ಲೆ ನಡೆಸಿದ ಪತಿ Read More

ಕೌಟುಂಬಿಕ ಕಲಹದಿಂದ ಆಕ್ರೋಶಗೊಂಡು ಪತ್ನಿಯ ಕೊಂದ ಪತಿ

ಮೈಸೂರು: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿರಾಯನೊಬ್ಬ ಪತ್ನಿಯ ಕತ್ತು ಕತ್ತರಿಸಿ ಹತ್ಯೆ ಮಾಡಿರುವ ಘಟನೆ ಸಾಂಸ್ಕೃತಿಕ ನಗರಿಯಲ್ಲಿ ನಡೆದಿದೆ.

ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ಈ ಹೇಯ ಘಟನೆ ನಡೆದಿದ್ದು,ಶೃತಿ (28) ಕೊಲೆಯಾದ ಪತ್ನಿ.ಮನು(27) ಹತ್ಯೆ ಮಾಡಿದ ಪತಿ.ಪತ್ನಿಯ ಕೊಂದ ನಂತರ ಈತ ಪೊಲೀಸರಿಗೆ ಶರಣಾಗಿದ್ದಾನೆ.

ಬನುಮಯ್ಯ ಕಾಲೇಜಿನಲ್ಲಿ ಬಿಕಾಂ ನಲ್ಲಿದ್ದ ವೇಳೆ ಶೃತಿ,ಮನು ಪರಸ್ಪರ ಪ್ರೀತಿಸಿ,5 ವರ್ಷಗಳ ಹಿಂದೆ ಮದುವೆ ಆಗಿದ್ದಾರೆ.

ಇಬ್ಬರದು ಅಂತರ್ಜಾತಿ ವಿವಾಹ, ಲಕ್ಷ್ಮಿಕಾಂತ ನಗರದಲ್ಲಿ ಮನೆ ಮಾಡಿ ವಾಸವಿದ್ದರು.ಆಗಾಗ ದಂಪತಿ ನಡುವೆ ಕ್ಷುಲ್ಲಕ ಕಾರಣಗಳಿಗೆ ಜಗಳ ನಡೆಯುತ್ತಲೆ ಇತ್ತು.

ಗುರುವಾರ ಕೂಡಾ ಮುಂಜಾನೆ ಜಗಳವಾಗಿದೆ.ಈ ವೇಳೆ ಅದು ವಿಕೋಪಕ್ಕೆ ತಿರುಗಿ ಕೋಪದಲ್ಲಿ ಪತ್ನಿಯ ಕುತ್ತಿಗೆ ಕೊಯ್ದು ಹತ್ಯೆ ಮಾಡಿ ನಂತರ ಮನು ಸೀದಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಈ ಸಂಬಂಧ ಹೆಬ್ಬಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕೌಟುಂಬಿಕ ಕಲಹದಿಂದ ಆಕ್ರೋಶಗೊಂಡು ಪತ್ನಿಯ ಕೊಂದ ಪತಿ Read More

ದ್ವಿಚಕ್ರ ವಾಹನದಿಂದ ಡಿಕ್ಕಿ ಹೊಡೆದು ಪತ್ನಿಯ ಕೊಲ್ಲಲು ಯತ್ನಿಸಿದ ಪತಿ

ಮೈಸೂರು:‌ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಪತ್ನಿಯನ್ನು ಕೊಲ್ಲಲು ಪತಿ ಅಕ್ಸಿಡೆಂಟ್ ಮಾಡಿರುವ ಹೇಯ ಘಟನೆ ನಗರದಲ್ಲಿ ನಡೆದಿದೆ.

ಘಟನೆಯಲ್ಲಿ ಪತ್ನಿ ಮಮತಾ ತೀವ್ರವಾಗಿ ಗಾಯಗೊಂಡಿದ್ದಾರೆ,ಪತಿ ಮಹದೇವಪ್ಪ ಅಲಿಯಾಸ್ ಪ್ರಸಾದ್ ಪುರೋಹಿತ್ ಕೊಲೆಗೆ ಯತ್ನಿಸಿದ ಪತಿ.

ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಮತಾರನ್ನು ಮತ್ತೊಂದು ವಾಹನದಲ್ಲಿ ಬಂದ ಪತಿ ಮಹದೇವಪ್ಪ ಢಿಕ್ಕಿ ಹೊಡೆದು ಕೊಲೆಗೆ ಯತ್ನಿಸಿದ್ದಾನೆ.ಇದರಿಂದ ಆಕೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪತಿ ಮಹದೇವಪ್ಪ @ ಪ್ರಸಾದ್ ಪುರೋಹಿತ್ ಮೇಲೆ ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

23 ವರ್ಷಗಳ ಹಿಂದೆ ಮಮತಾ ಹಾಗೂ ಮಹದೇವಪ್ಪ ಅವರ ವಿವಾಹವಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಮಹದೇವಪ್ಪ @ಪ್ರಸಾದ್ ಪುರೋಹಿತ್ ಗೆ ಪರಸ್ತ್ರೀ ಸಹವಾಸ ಇದ್ದು, ಇದನ್ನ ಮಮತಾ ಪ್ರಶ್ನಿಸಿದ್ದಾರೆ,ಇದೇ ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆ.

ಪತ್ನಿಗೆ ವಿಚ್ಛೇದನ ನೀಡಲು ಮಹದೇವಪ್ಪ ವಕೀಲರ ನೋಟೀಸ್ ಜಾರಿ ಮಾಡಿಸಿದ್ದಾನೆ.

ಆದರೂ ಕಿರುಕುಳ ನೀಡುವುದಿಲ್ಲವೆಂದು ಭರವಸೆ ನೀಡಿ ಮಹದೇವಪ್ಪ ಮತ್ತೆ ಪತ್ನಿ ಜೊತೆ ಸೇರಿದ್ದಾರೆ. ಒಂದು ವಾರದ ನಂತರ ಪತ್ನಿಯನ್ನ ಮಹದೇಶ್ವರ ಬೆಟ್ಟಕ್ಕೆ ಹೋಗುವಂತೆ ಮನ ಒಲಿಸಿ ಕಳಿಸಿದ್ದಾನೆ. ಪತ್ನಿ ಹಿಂದಿರುಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿ ಮತ್ತಿತರ ವಸ್ತುಗಳ ಜೊತೆ ಮಹದೇವಪ್ಪ ಪರಾರಿಯಾಗಿದ್ದಾನೆ.

ಕೆಲವು ದಿನಗಳ ಹಿಂದೆ ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯ ಬನಶಂಕರಿ ದೇವಸ್ಥಾನದ ಮುಂಭಾಗ ಮಮತಾ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಎದುರಿ ನಿಂದ ಮತ್ತೊಂದು ದ್ವಿಚಕ್ರ ವಾಹನದಲ್ಲಿ ಬಂದ ಮಹದೇವಪ್ಪ ಪತ್ನಿಗೆ ಢಿಕ್ಕಿ ಹೊಡೆದಿದ್ದಾರೆ.

ಅದೃಷ್ಟವಶಾತ್ ಮಮತಾ ಬಚಾವ್ ಆಗಿದ್ದಾರೆ.ಕೊಲೆ ಮಾಡುವ ಉದ್ದೇಶದಿಂದ ಢಿಕ್ಕಿ ಹೊಡೆದಿದ್ದಾರೆಂದು ಮಮತಾ ಪತಿ ವಿರುದ್ದ ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದ್ವಿಚಕ್ರ ವಾಹನದಿಂದ ಡಿಕ್ಕಿ ಹೊಡೆದು ಪತ್ನಿಯ ಕೊಲ್ಲಲು ಯತ್ನಿಸಿದ ಪತಿ Read More