ಒಕ್ಕಲಿಗರ ಕ್ಷೇಮಾಬಿವೃದ್ದಿ ಸಂಘದಿಂದ ರಾಜ್ಯೋತ್ಸವ ಆಚರಣೆ

ಮೈಸೂರು:ಮೈಸೂರಿನ ಹೂಟಗಳ್ಳಿ ಒಕ್ಕಲಿಗರ ಕ್ಷೇಮಾಬಿವೃದ್ದಿ ಸಂಘದ ವತಿಯಿಂದ ಕೆ.ಹೆಚ್.ಬಿ. ಬಡಾವಣೆ ಒವೆಲ್ ಉದ್ಯಾನವನದಲ್ಲಿ 70 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಸಂಘದ ಅಧ್ಯಕ್ಷ ರಾದ ಎನ್.ಟಿ. ದಾಸೇಗೌಡ ಅವರ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಯಾಗಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡರು ಭಾಗವಹಿಸಿ ಧ್ವಜಾರೋಹಣ ಮಾಡಿದರು.

ಮತ್ತೊಬ್ಬ ಮುಖ್ಯ ಅತಿಥಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಿಕಾ ಸುರೇಶ್, ಜೆ.ಡಿ.ಎಸ್ ಮುಖಂಡರಾದ ಸುರೇಶ, ತಾಲೂಕು ಪಂಚಾಯಿತಿ ಸದಸ್ಯರಾದ ವಿಜಯಕುಮಾರ, ಪಂಚಾಯ್ತಿ ಸದಸ್ಯರಾದ ಸಿದ್ದರಾಜು (ಡೈರಿ )ಹಾಗೂ ಸಂಘದ ಎಲ್ಲಾ ಮಾಜಿ ಅಧ್ಯಕ್ಷರು, ಮಾಜಿ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು, ಸಂಘದ ಹಾಲಿ ಪದಾಧಿಕಾರಿಗಳು ಕೆ. ಹೆಚ್.ಬಿ.ಬಡಾವಣೆಯ ನಿವಾಸಿಗಳು ಹಾಗೂ ಕನ್ನಡ ಅಭಿಮಾನಿಗಳು ಭಾಗವಹಿಸಿದರು.

ಕಾರ್ಯಕ್ರಮದ ವೇಳೆ ಎಲ್ಲರಿಗೂ ಸಿಹಿ ವಿತರಣೆ ಮಾಡಲಾಯಿತು.

ಒಕ್ಕಲಿಗರ ಕ್ಷೇಮಾಬಿವೃದ್ದಿ ಸಂಘದಿಂದ ರಾಜ್ಯೋತ್ಸವ ಆಚರಣೆ Read More

ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು: ಅಶೋಕ

ಬೆಂಗಳೂರು: ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕರೆ ನೀಡಿದರು.

ರಾಜ್ಯ ಒಕ್ಕಲಿಗರ ಜಾಗೃತಿ ಸಂಘದಿಂದ ಕುವೆಂಪು ಕಲಾಕ್ಷೇತ್ರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ನಮ್ಮ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು,ಆಗ ಮಾತ್ರ ಸಮುದಾಯಕ್ಕೆ ನ್ಯಾಯ ದೊರೆಯುತ್ತದೆ ಎಂದು ಹೇಳಿದರು.

ನಾಡಪ್ರಭು ಕೆಂಪೇಗೌಡರು ಯಾರ ಮೇಲೂ ದಂಡೆತ್ತಿ ಹೋಗಿ ಸಾಮ್ರಾಜ್ಯ ಸ್ಥಾಪಿಸಲಿಲ್ಲ. ಅವರು ಎಲ್ಲರನ್ನೂ ಸಮಾನತೆಯಿಂದ ಕಂಡು ಬೆಂಗಳೂರನ್ನು ಕಟ್ಟಿದ್ದರು. ಮಾಜಿ ಸಿಎಂ ಎಸ್‌.ಎಂ.ಕೃಷ್ಣ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಸಮುದಾಯದಲ್ಲಿ ಇನ್ನಷ್ಟು ಯುವಜನರನ್ನು ಬೆಳೆಸಿದರೆ ಈ ರೀತಿ ಮಹಾನ್‌ ವ್ಯಕ್ತಿಗಳಾಗುತ್ತಾರೆ. ಬೇರೆ ಸಮುದಾಯಕ್ಕೆ ಅನ್ಯಾಯ ಮಾಡದೆ ನಮ್ಮ ಸಮುದಾಯಕ್ಕಾಗಿ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದರು.

ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪ್ರತಿ ವರ್ಷ ಆಚರಣೆ ಮಾಡಿದರೆ ಸಾಲುವುದಿಲ್ಲ, ಒಕ್ಕಲಿಗ ಸಮುದಾಯದವರು ಕೃಷಿ ಮಾಡುವವರು. ಇಂತಹ ಸಮುದಾಯದವರ ಹಕ್ಕುಗಳಿಗಾಗಿ ಎಲ್ಲರೂ ಒಗ್ಗೂಡಬೇಕು. ಈ ಹಿಂದೆ ಒಂದು ಬಾರಿ ಹಕ್ಕುಗಳಿಗಾಗಿ ಹೋರಾಡಿದ್ದನ್ನು ನೋಡಿದ್ದೇನೆ. ಮತ್ತೆ ಎಂದೂ ಹೋರಾಟ ಮಾಡಿದ್ದನ್ನು ಕಂಡಿಲ್ಲ ಎಂದು ಅಶೋಕ್ ತಿಳಿಸಿದರು.

ಶ್ರೀ ಬಾಲಗಂಗಾಧನರನಾಥ ಸ್ವಾಮೀಜಿಯವರ ಪ್ರೇರಣೆಯಿಂದಾಗಿ 70 ವರ್ಷದ ಬಳಿಕ ವಿಧಾನಸೌಧ ಮುಂಭಾಗ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಸಾಧ್ಯವಾಯಿತು. ಅಂದರೆ ಕೆಂಪೇಗೌಡರಿಗೆ ಆ ಗೌರವ ನೀಡಲು ಅಷ್ಟು ವರ್ಷ ಬೇಕಾಯಿತು. ನಾನು ಕಂದಾಯ ಸಚಿವನಾಗಿದ್ದಾಗ ಒಂದೇ ತಿಂಗಳಲ್ಲಿ ನಿರ್ಣಯ ತೆಗೆದುಕೊಂಡು ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲಾಯಿತು. ಅದೇ ರೀತಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಪ್ರತಿಮೆ ಸ್ಥಾಪಿಸಲಾಯಿತು ಎಂದು ಅಶೋಕ್‌ ಹೇಳಿದರು.

ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು: ಅಶೋಕ Read More