ರವಿ ಬಸ್ರೂರು ಅವರ ಕಂಠಸಿರಿಗೆ ಮಾರು ಹೋದ ಕರುನಾಡ ಜನತೆ
ಮೈಸೂರು: ಖ್ಯಾತ ಕನ್ನಡ ಸಂಗೀತ ಸಂಯೋಜಕ ರವಿ ಬಸ್ರೂರು ಅವರ ಕಂಠಸಿರಿಗೆ ಕರುನಾಡ ಜನತೆ ಮಾರು ಹೋದರು.
ಉತ್ತನಹಳ್ಳಿಯಲ್ಲಿ ನಡೆಯುತ್ತಿರುವ ಯುವದಸರಾದ ಎರಡನೆ ದಿನದಲ್ಲಿ ಕಾರ್ಯಕ್ರಮ ನೀಡಿದ ಅವರು
ಉಗ್ರಂ ಚಿತ್ರದ ಉಗ್ರಾಂ ವಿರಾಮ್ ಗೀತೆಯನ್ನು ಹಾಡುತ ನೋಡುಗರ ಮೈ ಜುಮ್ ಎನಿಸುವಂತೆ ಮಾಡಿದರು.

ನನ್ನ ಜೀವನದ ಮ್ಯೂಸಿಕ್ ಜರ್ನಿ ಆರಂಭವಾಗಿದ್ದು ಮೈಸೂರಿನಿಂದಲೇ ಭಕ್ತಿಗೀತೆ ಮೂಲಕ ಆರಂಭಿಸಿದ ಜರ್ನಿ ಇಂದು ಉತ್ತಮ ಮಟ್ಟಕ್ಕೆ ತಂದು ನಿಲ್ಲಿಸಿದೆ ಎಂದು ಹೇಳಿ, ಮೈಸೂರು ಜನತೆಗೆ ದಸರಾ ಶುಭಾಶಯವನ್ನು ತಿಳಿಸಿದರು.

ನಂತರ ರವಿ ಬಸ್ರೂರು ತಾವೇ ಸಂಯೋಜಿಸಿರುವ ವಿವಿಧ ಚಿತ್ರದ ಗೀತೆಗಳನ್ನು ಆರಂಭಿಸಿ ಯುವ ಜನತೆ ಕುಣಿದು ಕುಪ್ಪಳಿಸುವಂತೆ ಮಾಡಿದರು.
ರೋಜ್ ಚಿತ್ರದ ನಾಯಕಿ ಸಾಧ್ವೀಕ ಅವರು ಡಿಸ್ಕೋ ಆಡಲಕ ಗಲ್ಲು ಗಲ್ಲು ಗೆಜ್ಜೆ ಕಟ್ಟಿನಿ, ಶೇಕ್ ಹಿಟ್ ಪುಷ್ಪಾವತಿ, ಬೇಬಿ ಡ್ಯಾನ್ಸ್ ಫ್ಲೋರ್ ರೆಡ್ಡಿ ಎಂಬ ದರ್ಶನ ಅವರ ಚಿತ್ರದ ಗೀತೆಗಳಿಗೆ ಹೆಜ್ಜೆ ಹಾಕುವಂತೆ ಮಾಡಿದರು.
ಕನ್ನಡ ನಾಡಿನ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರ ಅಂಜನಿ ಪುತ್ರ ಚಿತ್ರದ ಗೀತೆಯನ್ನು ಹಾಡುವ ಮೂಲಕ ನಟ ಪುನೀತ್ ರಾಜ್ ಕುಮಾರ್ ಅವರನ್ನು ನೆನೆಸಿಕೊಂಡರು.
ಗಾಯಕಿ ವಿಜಯಲಕ್ಷ್ಮಿ ಅವರು ನಮಾಮಿ ನಮಾಮಿ ಈಶ್ವರ ಪದ ಪೂಜೀತಂ ಎಂಬ ಗೀತೆಯ ಮೂಲಕ ಎಲ್ಲರನ್ನು ರೋಮಾಂಚನಗೊಳಿಸಿದರು.
ಗಾಯಕ ಸಂತೋಷ್ ವೆಂಕಿ ದ್ವಾಪರದಲ್ಲಿ ಶ್ರೀ ಕೃಷ್ಣ ಗೀತೆಯೂ ಯುವ ಮನಸನ್ನು ಮುಟ್ಟಿತು. ಕನ್ನಡ ಕೋಗಿಲೆ ಖ್ಯಾತಿಯ ದಿವ್ಯ ರಾಮಚಂದ್ರ,ಸಂತೋಷ್ ವೆಂಕಿ ಹಾಗೂ ಸಂಗಡಿಗರು ಮೈಸೂರು ದಸರಾ ಗೀತೆಯನ್ನು ವಿಭಿನ್ನ ಶೈಲಿಯಲ್ಲಿ ಹಾಡಿದರು.
ಬಾಲಿವುಡ್ ಹಿನ್ನೆಲೆ ಗಾಯಕಿ ಧ್ವನಿ ಭಾನುಶಾಲಿ ಅವರ ಧ್ವನಿಯು ಯುವ ಮನಸ್ಸುಗಳನ್ನು ಸೆಳೆಯುವಲ್ಲಿ ಯಶಸ್ವಿ ಕಂಡಿತ್ತು, ಕಾರ್ಯಕ್ರಮದ ಆರಂಭದ ಸಂದರ್ಭದಲ್ಲಿ ತುಂತುರು ಮಳೆ ಕಾಣಿಸಿಕೊಂಡರು ‘ಹಿಷರೆ ಮೆರೆ ಕಾಮರೆಮೆ ‘ ಗೀತೆಯ ಮೂಲಕ ಯುವ ಮನಸುಗಳನ್ನು ಮೈದಾನದಲ್ಲೇ ಕುಣಿದು ಕುಪ್ಪಳಿಸುವಂತೆ ಮಾಡಿತ್ತು.
ದಿಲ್ಬರ್ ದಿಲ್ಬರ್, ಪುಷ್ಪ ಚಿತ್ರದ ಹಿಂದಿ ವರ್ಷನ್ ಹು ಅಂಟವಾ ಮಾವ ಗೀತೆಗೆ ತಮ್ಮ ತಂಡದ ಜೊತೆಗೆ ಹೆಜ್ಜೆ ಹಾಕಿ ನೋಡುಗರ ಕಣ್ಮನ ಸೆಳೆಯುತ ಶಿಲ್ಲೆ.ಚಪ್ಪಾಳೆಯ ಜಾತ್ರೆಯನ್ನೇ ಹೆಚ್ಚಿಸಿದರು. ಕೋಕಾ ಎಂಬ ಹಿಂದಿ ಗೀತೆಯನ್ನು ಹಾಡುತ್ತಾ ಯುವ ಮನಸ್ಸುಗಳನ್ನು ಸೆಳೆಯುವುದರ ಜೊತೆಗೆ ಕುಣಿದು ಕುಪ್ಪಳಿಸಿ ಎಲ್ಲರನ್ನೂ ರಂಜಿಸಿ ಎಲ್ಲರಿಗೂ ದಸರಾ ಹಬ್ಬದ ಶುಭ ಕೋರಿದರು.
ಒಟ್ಟಾರೆಯಾಗಿ ಬಾಲಿವುಡ್ ಗಾಯಕಿ ಬಾಲಿವುಡ್ ಹಿನ್ನೆಲೆ ಗಾಯಕಿ ಧ್ವನಿ ಭಾನುಶಾಲಿಯವರ ಕಂಠ ಸಿರಿಗೆ ಮನಸೋತು ಮೈಸೂರು ಯುವ ಜನತೆ ಕುಣಿದು ಕುಪ್ಪಳಿಸಿದರು.
ಮೈಸೂರು ಜಿಲ್ಲಾ ಡ್ಯಾನ್ಸ್ ಕೊರಿಯೋಗ್ರಾಫರ್ ಅಸೋಸಿಯೇಷನ್ ತಂಡವು ಯುವ ದಸರಾ ಕಾರ್ಯಕ್ರಮಕ್ಕೆ ಮೆರಗು ತಂದಿತು.
ರವಿ ಬಸ್ರೂರು ಅವರ ಕಂಠಸಿರಿಗೆ ಮಾರು ಹೋದ ಕರುನಾಡ ಜನತೆ Read More