ತಮಿಳುನಾಡು: ತಮಿಳುನಾಡಿನ
ಶಿವಗಂಗಾ ಜಿಲ್ಲೆಯ ಕಲ್ಲು ಕ್ವಾರಿ ಸ್ಥಳದಲ್ಲಿ ಬೆಳಿಗ್ಗೆ ಇದ್ದಕ್ಕಿದ್ದಂತೆ ಬಂಡೆಗಳು ಕುಸಿದು ಐದು ಮಂದಿ ಮೃತಪಟ್ಟಿದ್ದಾರೆ.
ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಸಿಂಗಂಪುನಾರಿ ಬಳಿಯ ಮಲ್ಲಕೊಟ್ಟೈನಲ್ಲಿರುವ ಕ್ವಾರಿ ಸ್ಥಳದಲ್ಲಿ ಸಂತ್ರಸ್ತರು, ಹೆಚ್ಚಾಗಿ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು,ರಕ್ಷಣಾ ಕಾರ್ಯ ಮುಂದುವರಿದಿದೆ.

ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಸಿಬ್ಬಂದಿ ಕಲ್ಲುಗಳನ್ನು ತೆರವುಗೊಳಿಸಿದ ನಂತರ ಮೂವರ ಶವಗಳನ್ನು ಹೊರತೆಗೆದಿದ್ದಾರೆ.
ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ, ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ಮಧುರೈ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿಯಿಡೀ ಬಿದ್ದ ಮಳೆ ಅಥವಾ ಕಾರ್ಮಿಕರು ಬಳಸಿದ ಸ್ಫೋಟಕಗಳಿಂದ ಕಲ್ಲುಗಳು ಸಿಡಿದಿವೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.