ಮೈಸೂರಿನಲ್ಲಿ ರೇವ್‌ ಪಾರ್ಟಿ: ಸೂಕ್ತ ಕ್ರಮ ಕೈಗೊಳ್ಳುವಂತೆ ತೇಜಸ್ವಿ ಆಗ್ರಹ

Spread the love

ಮೈಸೂರು: ಮೈಸೂರು ತಾಲೂಕು ಮೀನಾಕ್ಷಿಪುರದ ಖಾಸಗಿ ಜಮೀನಿನಲ್ಲಿ ರೇವ್‌ ಪಾರ್ಟಿ ನಡೆಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕನ್ನಡ ಚುಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ‌ ಒತ್ತಾಯಿಸಿದ್ದಾರೆ.

ರೇವ್‌ ಪಾರ್ಟಿ ನಡೆಸಿದವರ ಮೇಲೆ ಪೊಲೀಸರು ದಾಳಿ ನಡೆಸಿ ಬಂಧಿಸಿರುವುದಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮತ್ತು ಇಲವಾಲ ಪಿಎಸ್ಐ ಮಂಜುನಾಥ್ ಹಾಗೂ ಸಿಬ್ಬಂದಿ ವರ್ಗಕ್ಕೆ ತೇಜಸ್ವಿ ನಾಗಲಿಂಗ ಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಉದ್ಯಮಿಗಳ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಯುವತಿಯರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಈ ರೀತಿಯ ಬೆಳವಣಿಗೆ ನಡೆದಿರುವುದು ನಿಜಕ್ಕೂ ದುರಂತ ಎಂದು ತೀವ್ರವಾಗಿ ಖಂಡಿಸಿದ್ದಾರೆ.

ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಜಮೀನಿನ ಮಾಲೀಕ, ಪಾರ್ಟಿ ಆಯೋಜಕರು ಮತ್ತು ಭಾಗವಹಿಸಿದ್ದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.