ಹುಲಿ ದಾಳಿಗೆ ಮೈಸೂರಿನಲ್ಲಿ ಮೂರನೇ ಬಲಿ: ಅಧಿಕಾರಿಗಳ ವಿರುದ್ಧ ತೇಜಸ್ವಿ ಆಕ್ರೋಶ

Spread the love

ಮೈಸೂರು, ನವೆಂಬರ್. ೧: ಮೈಸೂರು ಜಿಲ್ಲೆಯಲ್ಲಿ ಮಾನವ ಪ್ರಾಣಿ ಸಂಘರ್ಷ ಮುಂದುವರೆದಿದ್ದುಒಂದೇ ತಿಂಗಳಲ್ಲಿ ಹುಲಿ ದಾಳಿಗೆ ಮೂರನೆ ಬಲಿಯಾಗಿರುವುದು ಅತ್ಯಂತ ದುರದೃಷ್ಟಕರ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಕೂಡಲೇ ರಾಜ್ಯ ಸರ್ಕಾರ ಮೃತ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸರಗೂರು ತಾಲೂಕಿನ ಕೂಡಗಿ ಗ್ರಾಮದ
ಹೆಡಿಯಾಲ ಅರಣ್ಯ ಇಲಾಖೆಯ ಮೊಳೆಯೂರು ವಿಭಾಗದಲ್ಲಿ ದೊಡ್ಡನಿಂಗಯ್ಯ(53) ಎಂಬವರು ಹುಲಿ ದಾಳಿಗೆ ಬಲಿಯಾಗಿದ್ದಾರೆ.

ದೊಡ್ಡನಿಂಗಯ್ಯ ಪ್ರತಿದಿನದಂತೆ ಜಮೀನಿನ ಬಳಿ ಆಡು-ಕುರಿ ಮೇಯಿಸುತ್ತಿದ್ದ ವೇಳೆ
ಏಕಾಏಕಿ ದಾಳಿ ಮಾಡಿದ ಹುಲಿ ಕಾಡಿನೊಳಗೆ ಎಳೆದೊಯ್ದಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ಸಂಪೂರ್ಣ ನಿರ್ಲಕ್ಷ್ಯದಿಂದಾಗಿಯೇ ಒಂದೇ ತಿಂಗಳಲ್ಲಿ ಈ ರೀತಿಯ ಘಟನೆ ಮರುಕಳಿಸಲು ಕಾರಣ ವಾಗಿದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಲಕ್ಷ್ಯ ವಯಿಸಿದ ಎಲ್ಲಾ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಸೇವೆ ಇಂದ ವಜಾ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ

ಕೂಡಲೇ ರಾಜ್ಯ ಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮೃತ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡುವಂತೆ. ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿ