(ವರದಿ: ಸಿದ್ದರಾಜು,ಕೊಳ್ಳೇಗಾಲ)
ಕೊಳ್ಳೇಗಾಲ: ಮಲೈಮಹದೇಶ್ವರ ಅರಣ್ಯ ವನ್ಯಜೀವಿ ವಿಭಾಗದಲ್ಲಿ ನಡೆದ ಐದು ಹುಲಿ ಸಾವಿನ ಪ್ರಕರಣದ ಮೂವರು ಆರೋಪಿಗಳನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು.
ಹನೂರು ತಾಲ್ಲೂಕಿನ ಮಿಣ್ಯಂ ವ್ಯಾಪ್ತಿಯ ಕೊಪ್ಪ ಗ್ರಾಮದ ಮಾಧುರಾಜ್, ನಾಗರಾಜ್, ಕೊನ್ನಪ್ಪ ಎಂಬ ಆರೋಪಿಗಳನ್ನು
ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕಾವ್ಯಶ್ರೀ ಅವರ ಮುಂದೆ ಹಾಜರು ಪಡಿಸಲಾಯಿತು.
ಈ ವೇಳೆ ನ್ಯಾಯಾಧೀಶರು ಆರೋಪಿಗಳನ್ನು ಮೂರು ದಿನಗಳ ಕಾಲ (ಸೋಮವಾರ ತನಕ) ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಡಿಸಿಎಫ್ ಚಕ್ರಪಾಣಿ, ಎಸಿಎಫ್ ಗಜಾನನ ಹೆಗಡೆ ಹಾಗೂ ಹೂಗ್ಯಂ ಅರಣ್ಯ ವಲಯಾಧಿಕಾರಿ ಮಾದೇಶ್ ತಂಡದೊಂದಿಗೆ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.