ಮೊದಲ ಆಶಾಡ ಶುಕ್ರವಾರ:‌ಮಹಿಳಾ ಭಕ್ತರಿಗೆ ಉಡಿ ತುಂಬಿದ ಮಹಿಳೆಯರು

Spread the love

ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಮೊದಲ ಆಷಾಢ ಶುಕ್ರವಾರ ಅಂಗವಾಗಿ ಚಾಮುಂಡಿ ಬೆಟ್ಟದ ಪಾದದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸಿದ ಮಹಿಳೆಯರಿಗೆ ಅರಿಶಿಣ ,ಕುಂಕುಮ ಬಳೆಗಳೊಂದಿಗೆ ಬಾಗಿನ ನೀಡಿ ಉಡಿ ತುಂಬಲಾಯಿತು.

ಈ ವೇಳೆ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್
ಆಷಾಢ ಮಾಸದಲ್ಲಿ ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನಡೆಸಲಾಗುತ್ತದೆ. ಈ ಹಿನ್ನಲೆಯಲ್ಲಿ ಸಾವಿರಾರು ಭಕ್ತರು ತಾಯಿಗೆ ಹರಕೆ ತಿರಿಸಲು ಬೆಟ್ಟದ ಪಾದದಿಂದ ಬೆಟ್ಟದ ಮೇಲಿನ ವರೆಗೂ ಅರಿಶಿನ ಕುಂಕುಮ ಹಚ್ಚುತ್ತಾರೆ. ಅಂತಹ ಮಹಿಳಾ ಭಕ್ತಾಧಿಗಳಿಗೆ ಅರಿಶಿನ ಕುಂಕುಮ ಹಾಗೂ ಬಳೆಗಳನ್ನು ನೀಡಿ ಅವರಿಗೆ ತಾಯಿ ಚಾಮುಂಡೇಶ್ವರಿ ಒಳಿತು ಮಾಡಲಿ ಎಂದು ಆರೈಸುತ್ತಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಾಜ ಸೇವಕಿ ಖುಷಿವಿನು, ಸರಸ್ವತಿ ಹಲಸಗಿ,
ಸವಿತಾ ಘಾಟ್ಕೆ, ಜಯಶ್ರೀ ಶಿವರಾಮ್, ಸುಶೀಲ,ಮತ್ತಿತರರು ಹಾಜರಿದ್ದರು.