ಕೊಳ್ಳೇಗಾಲ: ಉಪ್ಪಾರ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ, ಅವರನ್ನು ಮುಖ್ಯ ವಾಹಿನಿಗೆ ತರಲು ಮನಃಪೂರ್ವಕವಾಗಿ ಪ್ರಯತ್ನಿಸುತ್ತೇನೆ ಎಂದು ಹನೂರು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು
ಭಗೀರಥ ಜಯಂತಿ ಅಂಗವಾಗಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕೊಳ್ಳೇಗಾಲ ಪಟ್ಟಣದಲ್ಲಿ ಆಯೋಜಿಸಿದ್ದ ಭಗೀರಥ ಜಯಂತಿಯ ಮೆರವಣಿಗೆಯ ಮಾರ್ಗಮಧ್ಯೆ ಭಾಗವಹಿಸಿ ಭಗೀರಥ ರಥಕ್ಕೆ ಪುಷ್ಪನಮನ ಸಲ್ಲಿಸಿ ಮೆರವಣಿಗೆಯಲ್ಲಿ ಭಾಗವಹಿಸಿ ಸಮುದಾಯದ ಮುಖಂಡರುಗಳಿಗೆ ಭಗೀರಥ ಜಯಂತಿ ಶುಭ ಕೋರಿ ಮಾತನಾಡಿದರು.

ಹನೂರು ತಾಲೂಕಿನಲ್ಲಿ ಉಪ್ಪಾರ ಸಮುದಾಯ ಮೇಲೆತ್ತಲು ಪ್ರಾಮಾಣಿಕ ಶ್ರಮ ವಹಿಸುತ್ತೇನೆ. ಹನೂರು ಕ್ಷೇತ್ರದ ಅಭಿವೃದ್ಧಿ ಮಾಡಲು ನನಗೆ ಅವಕಾಶ ಮಾಡಿಕೊಟ್ಟ ಜನರ ಋಣ ತೀರಿಸುವ ಕೆಲಸ ಮಾಡಬೇಕಾಗಿದೆ ಈ ಜನರಿಗಾಗಿ ಕ್ಷೇತ್ರದ ಅಭಿವೃದ್ಧಿಗೆ ಭಗೀರತ್ನ ಪ್ರಯತ್ನ ಮಾಡುವುದಾಗಿ ಹೇಳಿದರು.
ಇಂದು ಆಚರಿಸಲಾಗುತ್ತಿರುವ ಈ ಜಯಂತಿ ಮಹೋತ್ಸವ ಮುಂದಿನ ದಿನಗಳಲ್ಲಿ ಭಗಿರಥರ ಹೆಸರಿನಂತೆ ಕೆಲಸ ಮಾಡಲು ಅನುಕೂಲವಾಗಲಿದೆ. ಹನೂರಿನಲ್ಲಿ ವಿಜೃಂಭಣೆಯ ಭಗಿರಥ ಜಯಂತಿ ಆಚರಿಸಲು ತೀರ್ಮಾನಿಸಿದ್ದು ಈ ನಿಟ್ಟಿನಲ್ಲಿ ಮುಖಂಡರ ಜೊತೆ ಚರ್ಚಿಸಿದ್ದೇನೆ. ಮಧುವನ ಹಳ್ಳಿಯಲ್ಲಿ ಆಶ್ರಯ ಬಡಾವಣೆ ಆಗಬೇಕಿದೆ ಅದಕ್ಕಾಗಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಎಸ್.ಬಾಲರಾಜು, ತಾಲೂಕು ಉಪ್ಪಾರ ಸಂಘದ ಗೌರವಾಧ್ಯಕ್ಷ ರಮೇಶ್, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷರಾದ ರಾಜೇಂದ್ರ, ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್, ಜಿ.ಪಂ ಮಾಜಿ ಸದಸ್ಯ ಕೊಪ್ಪಾಳಿ ಮಹದೇವನಾಯಕ
ಸಮುದಾಯದ ಮುಖಂಡರುಗಳಾದ ದೊಡ್ಡಿಂದುವಾಡಿ ಮಾದೇಶ್, ಶಿವಕುಮಾರ್, ಪ್ರಶಾಂತ್, ಮಹೇಶ್ ಮತ್ತಿತರರು ಹಾಜರಿದ್ದರು.
