ಮೈಸೂರು: ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ, ಎಲ್ಲಾ ಹಾವುಗಳು ವಿಷಕಾರಿಯಲ್ಲ ಎಂದು ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು.
ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಹಾವುಗಳ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 90000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಸ್ನೇಕ್ ಶ್ಯಾಮ್ ಅವರು ಅಭಿನಂದನೆ ಸ್ವೀಕರಿಸಿ ನಂತರ ಶಾಲೆಯ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿದರು.
ಅರಣ್ಯ ಇಲಾಖೆ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಿರುವುದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ನಾಗರಹಾವು,ಕಾಳಿಂಗ ಸರ್ಪ ವಿಷಕಾರಿ, ಹಪ್ಪಟೆ, ಕೇರೆ ಹಾವು, ಹಸಿರು ಹಾವು ಮುಂತಾದವು ವಿಷಕಾರಿಯಲ್ಲ. ಕೆಲವು ಹಾವುಗಳು ಹೆಚ್ಚು ವಿಷಕಾರಿಯಲ್ಲದಿದ್ದರೂ, ಹಪ್ಪಟೆ ಹಾವು ಕಚ್ಚಿದರೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು. ಹಾವುಗಳ ಬಗ್ಗೆ ಅನಗತ್ಯ ಭಯ ಬೇಡ ಎಂದು ಸಲಹೆ ನೀಡಿದರು.
ಹಾವು ಕಚ್ಚಿದಾಗ ಬಹುತೇಕ ಜನರು ಭಯದಿಂದ ಹೃದಯಾಘಾತದಿಂದ ಸಾವನ್ನಪ್ಪುತ್ತಾರೆ. ಹಾವು ಕಚ್ಚಿದಾಗ ಮೊದಲು ಆ ವ್ಯಕ್ತಿಗೆ ಧೈರ್ಯ ತುಂಬಬೇಕು ಮತ್ತು ಸಾಧ್ಯವಾದಷ್ಟು ಬೇಗ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಸ್ನೇಕ್ ಶ್ಯಾಮ್ ತಿಳಿಸಿದರು.
ಹಿರಿಯ ಸಮಾಜಸೇವಕರಾದ ಕೆ ರಘುರಾಮ್ ವಾಜಪೆಯಿ ಮಾತನಾಡಿ ಹಾವನ್ನ ನಾವು ಜೀವಭಯದಿಂದ ಹಿಡಿಯಬಾರದು, ವೈಜ್ಞಾನಿಕವಾಗಿ ಜೀವರಕ್ಷಣೆಯಿಂದ ಹಿಡಿಯಬೇಕು, ಹಬ್ಬ ಹರಿದಿನ ಇತಿಹಾಸದಲ್ಲೂ ಸಹ ಪ್ರತಿಯೊಂದು ಪ್ರಾಣಿ ಪಕ್ಷಿಗಳಿಗೂ ಸಹ ನಮ್ಮ ಪೂರ್ವಜರು ಪೂಜ್ಯ ಸ್ಥಾನ ನೀಡಿದ್ದಾರೆ, ಮಕ್ಕಳು ಸಣ್ಣ ವಯಸ್ಸಿನಲ್ಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ಬೆಳೆಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.
ಕಾಂಗ್ರಸ್ ಮುಖಂಡ ಎನ್.ಎಂ ನವೀನ್ ಕುಮಾರ್ ಅವರು ಮಾತನಾಡಿ ಕೋವಿಡ್ ನಂತಹ ಕಷ್ಟ ಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ ಸ್ನೇಕ್ ಶ್ಯಾಮ್ ಅವರು ಹಾವನ್ನ ಸಂರಕ್ಷಿಸಿದ್ದಾರೆ, ಅಂತರಾಷ್ಟ್ರೀಯ ಉರಗ ತಜ್ಞ ಸ್ನೇಕ್ ಶ್ಯಾಮ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ ಎಂದು ಹೇಳಿದರು.

ಅಷ್ಟೇ ಅಲ್ಲದೇ 85 ಸಾವಿರಕ್ಕೂ ಹೆಚ್ಚು ಹಾವನ್ನ ಸಂರಕ್ಷಿಸಿದ್ದಾರೆ, ಪರಿಸರ ಸಂರಕ್ಷಣೆ ಜೊತೆಯಲ್ಲೆ ಧಾರ್ಮಿಕ ಕೇಂದ್ರವನ್ನ ಸ್ಥಾಪಿಸಿರುವುದು ಶ್ಲಾಘನೀಯ, ಪರಿಸರ ಸಂರಕ್ಷಣೆ ವಿಚಾರವಾಗಿ ಪಠ್ಯಪುಸ್ತಕಗಳಲ್ಲಿ ಸ್ನೇಕ್ ಶ್ಯಾಮ್ ಅವರ ಸೇವೆ ಮತ್ತು ಪರಿಸರ ಕಾಳಜಿಯ ವಿಷಯದ ಬಗ್ಗೆ ರಾಜ್ಯ ಸರ್ಕಾರ ಅಳವಡಿಸಿ ಸಣ್ಣಮಕ್ಕಳಲ್ಲಿ ಉರಗ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ,
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ಶಾಲೆಯ ಮುಖ್ಯ ಉಪಾಧ್ಯಾಯರಾದ ಸುಗುಣಾವತಿ, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ಶ್ರೀನಿವಾಸ್, ಪ್ರವೀಣ್ ಕುಮಾರ್
ಮತ್ತಿತರರು ಭಾಗವಹಿಸಿದ್ದರು.