ಮಂಡ್ಯ: 14 ವರ್ಷದೊಳಗಿನ ತಾಲೋಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ
ಮಂಡ್ಯ ಜಿಲ್ಲೆ,ನಾಗಮಂಗಲ ತಾಲೋಕು ಆದಿಚುಂಚನಗಿರಿ ಬಿಜಿಎಸ್ ಆದಿಶಕ್ತಿ ಶಾಲೆ ಮಕ್ಕಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಬಿಜಿಎಸ್ ಶಾಲೆ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆದ ಆದಿಶಕ್ತಿ ಶಾಲೆ, ಆದಿಚುಂಚನಗಿರಿ ಮಕ್ಕಳಿಗೆ, ಮುಖ್ಯಶಿಕ್ಷಕರು ಮತ್ತು ಶಾಲೆಯ ಎಲ್ಲ ಶಿಕ್ಷಕರು ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ನೀಡಿ ಅಭಿನಂದನೆ ಸಲ್ಲಿಸಿದರು.
ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲೂ ಗೆಲುವು ಸಾಧಿಸಿ ಶಾಲೆಗೆ ಕೀರ್ತಿ ತರುವಂತೆ ಶುಭ ಕೋರಿದರು.