ನವದೆಹಲಿ: ಜನಾದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಗೆದ್ದಿರುವುದಕ್ಕೆ ನಾನು ಅಭಿನಂದಿಸುತ್ತೇನೆ. ಚುನಾವಣೆಯಲ್ಲಿ ಅವರು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತಾರೆ ಎಂಬುದಾಗಿ ಭಾವಿಸುತ್ತೇನೆ ಎಂದು ತಿಳಿಸಿದರು.
ಕಳೆದ 10 ವರ್ಷಗಳಲ್ಲಿ ನಾವು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ, ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡುವುದರ ಜೊತೆಗೆ ಜನರ ನಡುವೆಯೇ ಇದ್ದು ಅವರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇವೆ ಎಂದು ಕೇಜರಿವಾಲ್ ಹೇಳಿದರು.