ಮನೆಗಳಲ್ಲೇ ಆರ್ ಎಸ್ ಎಸ್ ಶಾಖೆ ಮಾಡುತ್ತೇವೆ – ಜೋಗಿಮಂಜು ಎಚ್ಚರಿಕೆ

Spread the love

ಮೈಸೂರು: ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಆರ್. ಎಸ್. ಎಸ್. ಚಟುವಟಿಕೆಗಳನ್ನು ನಿರ್ಬಂಧ ಹೇರುವ ನಿಟ್ಟಿನಲ್ಲಿ ಕ್ರಮ ಕೈಗೊಂಡರೆ ನಮ್ಮ ಮನೆಗಳ ಮೇಲೆ ಭಗವದ್ವಜ ಹಾರಿಸಿ, ಮನೆಗಳಲ್ಲಿ ಶಾಖೆ ಮಾಡುತ್ತೇವೆ ಎಂದು ಯುವಭಾರತ್ ಸಂಘಟನೆಯ ಜೋಗಿಮಂಜು ಎಚ್ಚರಿಸಿದ್ದಾರೆ.

ನೂರು ವರ್ಷಗಳ ಇತಿಹಾಸ ಇರುವ ಆರ್. ಎಸ್. ಎಸ್. ತನ್ನದೇ ಆದ ವೈಶಿಷ್ಟತೆಯನ್ನು ಹೊಂದಿದೆ,ಸ್ವಾತಂತ್ರ್ಯ ಹಾಗೂ ಸಾಮಾಜಿಕ ಕಾರ್ಯಗಳ ಹೋರಾಟದಲ್ಲಿ ತನ್ನದೇ ಆದ ಪ್ರಮುಖ ಪಾತ್ರ ವಹಿಸುವುದರ ಮೂಲಕ ಸಮಾಜದಲ್ಲಿ ಒಳ್ಳೆಯ ಹೆಸರನ್ನು ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯತೆ ಹಾಗೂ ಹಿಂದೂ ಧರ್ಮವನ್ನು ರಕ್ಷಿಸುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಮಾಡಿಕೊಂಡು ಬರುತಿದೆ ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಆರ್. ಎಸ್. ಎಸ್. ಚಟುವಟಿಕೆಗಳನ್ನು ನಡೆಸುವ ಸಂಬಂಧ ನಿರ್ಬಂಧ ಹೇರುವ ನಿಟ್ಟಿನಲ್ಲಿ ಕಾಂಗ್ರೆಸ್ ಹುನ್ನಾರ ನಡೆಸಲು ಮುಂದಾಗಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ತಮಿಳುನಾಡು ಮಾದರಿಯಲ್ಲಿ ಸಂಘದ ಮೇಲೆ ನಿರ್ಬಂಧ ಹೇರಲು ಪ್ರಯತ್ನ ಮಾಡುತ್ತಿದೆ, ಆದರೆ ತಮಿಳುನಾಡಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಸ್ವಂತ ಸ್ಥಳಗಳಲ್ಲಿ ಶಾಖೆ ಮಾಡಲು ಸಂಪೂರ್ಣ ಸ್ವಾತಂತ್ರ್ಯ ಇದೆ.

ಸರ್ಕಾರಕ್ಕೆ ಇದರ ಅರಿವಿಲ್ಲ ಎಂದು ಕಾಣುತ್ತದೆ, ಇಂತಹ ಕಿಡಿಗೇಡಿ ಕೃತ್ಯ ಕ್ಕೆ ರಾಜ್ಯ ಸರ್ಕಾರ ಕೈ ಹಾಕಿದರೆ ರಾಜ್ಯದ ಎಲ್ಲಾ ಸ್ವಯಂ ಸೇವಕರ ಮನೆಯ ಮೇಲೆ ಭಗವಧ್ವಜ ಹಾರಿಸಿ ನಮ್ಮ ಮನೆಗಳಲ್ಲೇ ಶಾಖೆ ಮಾಡಲಾಗುವುದು ಎಂದು ಜೋಗಿ ಮಂಜು ಎಚ್ಚರಿಸಿದ್ದಾರೆ.

ನಿರ್ಬಂಧ ದ ಹೇಳಿಕೆಗಳನ್ನು ನೀಡುವ ಮೂಲಕ ಸರ್ಕಾರ ತನ್ನ ದುರಾಡಳಿತವನ್ನು ಮರೆ ಮಾಚುತ್ತಿದೆ ಇಂತಹ ಭ್ರಷ್ಟ ಹಾಗೂ ಭಂಡ ಸರ್ಕಾರದಲ್ಲಿ ಜನಸಾಮಾನ್ಯರ ಕಷ್ಟ ಹೇಳತೀರದಾಗಿದೆ ಎಂದು ಅವರು ಟೀಕಿಸಿದ್ದಾರೆ.