
ಮೈಸೂರು: ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ನಿರ್ದೇಶನದ ವೀರ ಚಂದ್ರಹಾಸ ಚಿತ್ರದ ತಂಡದವರು ನಾಡ ಅದಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು.

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್ ಅರ್ಪಿಸುತ್ತಿರುವ ರವಿ ಬಸ್ರೂರು ನಿರ್ದೇಶನದ
ದಕ್ಷಿಣ ಕನ್ನಡ ಭಾಗದ ಸಂಸ್ಕೃತಿಯ ಪ್ರತೀಕವಾದ ಯಕ್ಷಗಾನ ಕಲೆಯ ಹಿನ್ನೆಲೆ
ಹಿರಿಮೆಯನ್ನು ನಾಡಿನ ಜನತೆಗೆ ಹೇಳಲು ಯಕ್ಷಗಾನ ಪ್ರಸಂಗ ಆಧಾರಿತ
ವೀರ ಚಂದ್ರಹಾಸ ಚಿತ್ರ ರಾಜ್ಯಾದ್ಯಂತ ತೆರೆಕಂಡಿದೆ,ಜತೆಗೆ ಉತ್ತಮ ಪ್ರತಿಕ್ರಿಯೆ ಕೂಡಾ ವ್ಯಕ್ತವಾಗಿದೆ.

ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಚಿತ್ರತಂಡ ಭೇಟಿ ಕೊಟ್ಟು ದೇವಿಯ ದರ್ಶನ ಪಡೆಯಿತು.
ರವಿ ಬಸ್ರೂರು ಅವರು ಯಕ್ಷಗಾನ ವೇಷದಲ್ಲೇ ದೇವಿಯ ದರ್ಶನ ಪಡೆದುದು ವಿಶೇಷ.
ಈ ವೇಳೆ ಮಾತನಾಡಿದ
ರವಿ ಬಸ್ರೂರು ಅವರು, ವೀರ ಚಂದ್ರಹಾಸ ನನ್ನ ಹಲವಾರು ವರ್ಷಗಳ ಕನಸು, ಯಕ್ಷಗಾನವನ್ನು ವಿಶ್ವಮಾನ್ಯ ಮಾಡಬೇಕೆಂದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದೇನೆ ಎಂದು ತಿಳಿಸಿದರು.
ಈ ಚಿತ್ರದ ಎಲ್ಲಾ ಪಾತ್ರಗಳನ್ನು ನಿಜವಾದ ವೃತ್ತಿಪರ ಯಕ್ಷಗಾನ ಕಲಾವಿದರೆ ನಿರ್ವಹಿಸಿದ್ದಾರೆ, ಹಾಗಾಗಿ ಇಡೀ ಚಿತ್ರ ತುಂಬಾ ನೈಜ್ಯವಾಗಿ ಮೂಡಿಬಂದಿದೆ ಎಂದು ಹೇಳಿದರು.

ವಿಶೇಷ ಪಾತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಭಿನಯಿಸುವ ಮೂಲಕ ನಮಗೆ ಆಶೀರ್ವದಿಸಿದ್ದಾರೆ ಎಂದು ರವಿ ಖುಷಿಯಿಂದ ತಿಳಿಸಿದರು.
ನಂತರ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಅವಧೂತ ಅರ್ಜುನ್ ಗುರೂಜಿ ಅವರ ಆಶೀರ್ವಾದ ಪಡೆದು ಅವರ ಜೊತೆ ಡಿ ಆರ್ ಸಿ ಮಾಲ್ ನಲ್ಲಿ
ಪ್ರೇಕ್ಷಕರ ಜೊತೆ ರವಿ ಬಸ್ರೂರು ಚಿತ್ರ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಚಿತ್ರತಂಡ ಹಾಗೂ ಕಲಾವಿದ ಪ್ರಕಾಶ್ ಚಿಕ್ಕಪಾಳ್ಯ, ಸಮಾಜ ಸೇವಕರಾದ ಜೋಗಿ ಮಂಜು, ರಿಷಿ ವಿಶ್ವಕರ್ಮ, ವಿಕ್ರಂ ಅಯ್ಯಂಗಾರ್, ಮಹಾನ್ ಶ್ರೇಯಸ್ ಮತ್ತಿತರರು ಹಾಜರಿದ್ದರು.