ನಂಜನಗೂಡು: ಇಂದಿನ ಯುವ ಪೀಳಿಗೆ ಹೆಚ್ಚಾಗಿ ಮಾದಕ ದ್ರವ್ಯಗಳ ಸೇವನೆಗೆ ದಾಸರಾಗುತ್ತಿದ್ದಾರೆ,ಇದು ಜೀವನವನ್ನೇ ನಾಶ ಮಾಡಿಬಿಡುತ್ತದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಸಿ.ಎಂ ರವೀಂದ್ರ ಅವರು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ಕೇವಲ ಗೆಳೆಯರಿಂದ ಅನುಭವ ಪಡೆಯಲಿಕ್ಕೆ ಮಾದಕ ದ್ರವ್ಯವನ್ನು ಸೇವಿಸಿ ನಂತರ ಅವುಗಳಿಗೆ ದಾಸರಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ರವೀಂದ್ರ ಅವರು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ನಗರ ಪ್ರದೇಶದಲ್ಲಿ ಇಂದು ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗಿದೆ,ಗ್ರಾಮೀಣ ಪ್ರದೇಶದಲ್ಲಿ ಅಷ್ಟು ಪ್ರಮಾಣದಲ್ಲಿ ಇಲ್ಲದಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಗ್ರಾಮೀಣದಲ್ಲಿಯೂ ಇದರ ಹಾವಳಿ ಹೆಚ್ಚಾಗಿದೆ. ಆದಕಾರಣ ಇದರ ಬಗ್ಗೆ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕೆಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ಅವರು ಅಧ್ಯಕ್ಷೀಯ ಭಾಷಣ ಮಾಡಿ, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಮಾದಕ ದ್ರವ್ಯ ಸೇವನೆಯನ್ನು ಮಾಡುವುದಿಲ್ಲ ಎಂದು ತಮ್ಮ ಹೃದಯವನ್ನು ಮುಟ್ಟಿ ಕೊಂಡು ಪ್ರತಿಜ್ಞೆ ಮಾಡಿದರೆ ಮಾತ್ರ ಇವುಗಳ ದುಶ್ಚಟಗಳಿಗೆ ಬಲಿಯಾಗುವುದಿಲ್ಲ ಎಂದು ಹೇಳಿದರು.
ಕಾರ್ಯಕ್ರಮದ ವೇಳೆ ಸಂವಾದ ಹಮ್ಮಿಕೊಂಡು ವಿದ್ಯಾರ್ಥಿಗಳು ಈ ವಿಷಯದ ಬಗ್ಗೆ ಪ್ರಶ್ನೆ ಕೇಳುವ ಮೂಲಕ ಉತ್ತರವನ್ನು ಪಡೆದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಲಿಂಗನಸ್ವಾಮಿ ಎನ್, ನಾಗರಾಜು, ಡಾ.ಕೆ. ಮಾಲತಿ ,ಭವ್ಯ ಸುಮಿತ್ರ ,ಸ್ವಾಮಿಗೌಡ, ಡಾ. ಟಿ.ಕೆ ರವಿ ,ಹೆಚ್.ಕೆ ಪ್ರಕಾಶ್ ,ಅದಿಲ್ ಹುಸೇನ್, ನಾಗರಾಜ ರೆಡ್ಡಿ, ರಾಮಾನುಜ,ಡಾ. ಸುಮಾ ,ಎನ್. ದಿನೇಶ್, ರೂಪ, ವತ್ಸಲ ,ಶೃತಿ ನಾಗರಾಜ್, ಬಿಂದು ,ಮಿಲ್ಟನ್ ,ಹರ್ಷಿತ್ ,ನಿಂಗಯ್ಯ ,ಮಾದೇವ ಸ್ವಾಮಿ ,ದಿವ್ಯ ಉಪಸ್ಥಿತರಿದ್ದರು.
