ಮೈಸೂರು: ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಹಾಗೂ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಮೈಸೂರು ನಗರ ವ್ಯಾಪ್ತಿಯ ಮಹಿಳೆಯರಿಗೆ ರಂಗೋಲೆ ಸ್ಪರ್ಧೆ ಆಯೋಜಿಸಲಾಗಿದೆ.
ಈ ಬಗ್ಗೆ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ಮಾಹಿತಿ ನೀಡಿದ್ದು, ಮೊದಲ 5 ಸ್ಥಾನ ಪಡೆದ ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುವುದು, ಹಾಗೂ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಅಭಿನಂದನಾ ಪತ್ರ ನೀಡಲಾಗುವುದು ಎಂದು ತಿಳಿಸಿದರು.
ಯುಗಾದಿ ಹಬ್ಬದಂದು ಮಹಿಳೆಯರು ತಮ್ಮ ಮನೆಗಳ ಮುಂದೆ ಆಕರ್ಷಕ ರಂಗೋಲಿಯನ್ನು ಬಿಡಿಸಿ 89713 89539
ಸಂಖ್ಯೆಗಳಿಗೆ ವಾಟ್ಸಪ್ ಮೂಲಕ ರಂಗೋಲಿ ಚಿತ್ರವನ್ನು ಕಳುಹಿಸಬೇಕು, ಸ್ಪರ್ಧೆಯಲ್ಲಿ ಭಾಗವಹಿಸುವರು ಹೆಸರು ಮತ್ತು ವಿಳಾಸ ದಾಖಲಿಸಬೇಕು ಎಂದು ಅವರು ಕೋರಿದ್ದಾರೆ.