ಮೈಸೂರು: ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಯುವಸಂಭ್ರಮದಲ್ಲಿ ನೃತ್ಯರೂಪಕಗಳು ಯುವ ಸಮೂಹದಲ್ಲಿ ದೇಶಪ್ರೇಮದ ಕಿಚ್ಚು ಹಚ್ಚಿದವು.
ದೇಶಭಕ್ತಿ, ರಾಷ್ಟ್ರೀಯತೆ, ಮಹಿಳಾ ಸಬಲೀಕರಣ, ಜೈ ಜವಾನ್-ಜೈ ಕಿಸಾನ್, ಜಾನಪದ, ಆಪರೇಷನ್ ಸಿಂಧೂರ್, ಕನ್ನಡ ನಾಡು ನುಡಿ ಸೇರಿದಂತೆ ವಿವಿಧ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರಸ್ತುಪಡಿಸಿದ ರೂಪಕಗಳು ಪ್ರೇಕ್ಷಕರ ಮನಸೂರೆಗೊಂಡವು.
ಮೈಸೂರು ಸಾತಗಳ್ಳಿ ವಿಶ್ವ ಭಾರತಿ ಕಾಲೇಜಿನಿಂದ ದಸರಾ ವೈಭವ, ಮೈಸೂರು ಹೆಚ್ ಡಿ ಕೋಟೆ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನ ಸಾಮಾಜಿಕ ನ್ಯಾಯ, ಮೈಸೂರು ಬಿಳಿಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ರೈತರು/ ಕೃಷಿ ಚಟುವಟಿಕೆ, ಚಾಮರಾಜನಗರ ಗುಂಡ್ಲುಪೇಟೆ ಬಾಬು ಸರ್ಕಾರಿ ಪದವಿ ಪೂರ್ವ ಕಾಲೇಜು ತೆರಕಣಾಂಬಿ ಕಾಲೇಜಿನ ವಿದ್ಯಾರ್ಥಿಗಳು ಸುದ್ದಿ ಮತ್ತು ಆಹಾರ ಧಾನ್ಯಗಳು, ಬೆಂಗಳೂರು ಹನುಮಂತನಗರ ನಗರ ಶ್ರೀ ಬಾಲಾಜಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೇಶದ ಸ್ವಾತಂತ್ರ್ಯದಲ್ಲಿ ಗಾಂಧೀಜಿಯವರ ಪಾತ್ರ, ಎಂಬ ನೃತ್ಯ ಪ್ರದರ್ಶನ ಮಾಡಿದರು.
ಕಾರ್ಯಕ್ರಮದಲ್ಲಿ 58 ನೃತ್ಯ ಪ್ರದರ್ಶನಗಳನು ಮಾಡಲಾಯಿತು.
ನೃತ್ಯ ಪ್ರಕಾರ, ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ, ಕೃಷ್ಣ, ದಸರಾ ವೈಭವ, ಆರೋಗ್ಯಕ್ಕೆ ಸಂಬಂಧಿಸಿದ, ಜನಕೇಂದ್ರಿತ, ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆಯ ಪಾತ್ರ, ಫ್ಯೂಜನ್, ಪೌರಾಣಿಕ, ಭಾರತೀಯ ಯೋಧರ ಪಾತ್ರ, ಕೊಡವ ನೃತ್ಯ, ಕರ್ನಾಟಕ ಜಾನಪದ ಹೀಗೆ ಹಲವಾರು ಕಾಲೇಜು ವಿದ್ಯಾರ್ಥಿಗಳ ನೃತ್ಯ ಪ್ರದರ್ಶನ ಯುವ ಜನರನ್ನು ಸೆಳೆಯಿತು.